ಉದಯವಾಹಿನಿ, ಬೀದ‌ರ್: ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಬಿಟ್ಟೂ ಬಿಡದೇ ಮಳೆ ಸುರಿಯುತ್ತಿದ್ದು, ಸತತ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.
ಬುಧವಾರ ಸಂಜೆಯಿಂದ ರಾತ್ರಿವರೆಗೆ ಸುರಿದ ಮಳೆ, ನಸುಕಿನ ಜಾವದ ವರೆಗೆ ಬಿಡುವು ನೀಡಿತು. ಪುನಃ ಆರಂಭಗೊಂಡ ಮಳೆ ಸತತವಾಗಿ ಸುರಿಯುತ್ತಿದೆ. ಮಳೆಯಿಂದ ದೈನಂದಿನ ಕೆಲಸಗಳಿಗೆ ಹೋಗುವವರು ಪರದಾಟ ನಡೆಸಿದರು. ಪ್ರಮುಖ ರಸ್ತೆಗಳಲ್ಲಿ ಅಪಾರ ನೀರು
ಸಂಗ್ರಹಗೊಂಡಿದ್ದರಿಂದ ವಾಹನಗಳು ನಿಧಾನ ಗತಿಯಲ್ಲಿ ಸಂಚರಿಸುತ್ತಿವೆ.
ನಗರದ ನೆಹರೂ ಕ್ರೀಡಾಂಗಣದಲ್ಲಿ ಅಪಾರ ನೀರು ಸಂಗ್ರಹಗೊಂಡಿದ್ದರಿಂದ ಕೆರೆಯಂತಾಗಿದೆ. ನಗರದ ಡಿಎಚ್‌ ಒ ಕಚೇರಿ ಪ್ರಾಂಗಣದಲೂ ಹೆಚ್ಚಿನ ನೀರು ನಿಂತಿದ್ದು. ಓಡಾಟಕ್ಕೆ ಅಲ್ಲಿನ ಸಿಬ್ಬಂದಿ ತೊಂದರೆ ಅನುಭವಿಸಿದರು.
ಸತತ ಮಳೆಗೆ ವಾತಾವರಣ ಸಂಪೂರ್ಣ ತಂಪಾಗಿದೆ. ಬಿಸಿಲಿನಿಂದ ಕಂಗೆಟ್ಟಿದ ಜನ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!