ಉದಯವಾಹಿನಿ, ನವದೆಹಲಿ: ಜೂನ್ 5, ವಿಶ್ವ ಪರಿಸರ ದಿನದಂದು, ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಲ್ಲಿರುವ ತಮ್ಮ 7 ಲೋಕ ಕಲ್ಯಾಣ್ ಮಾರ್ಗ್ ನಿವಾಸದಲ್ಲಿ ಸಿಂದೂರ ಸಸಿಯನ್ನು ನೆಟ್ಟರು. 1971 ರ ಯುದ್ಧದ ಸಮಯದಲ್ಲಿ ಅಸಾಧಾರಣ ಧೈರ್ಯವನ್ನು ಪ್ರದರ್ಶಿಸಿದ ಮಹಿಳೆಯರ ಗುಂಪೊಂದು ಅವರಿಗೆ ಈ ಸಸಿಯನ್ನು ಉಡುಗೊರೆಯಾಗಿ ನೀಡಿದ್ದು ವಿಶೇಷವಾಗಿದೆ.

ಇತ್ತೀಚೆಗೆ ಗುಜರಾತ್‌ಗೆ ಭೇಟಿ ನೀಡಿದ್ದಾಗ, 1971 ರ ಯುದ್ಧದಲ್ಲಿ ಧೈರ್ಯ ಮತ್ತು ತ್ಯಾಗಕ್ಕೆ ಮಾದರಿಯಾಗಿದ್ದ ಕಚ್‌ನ ಧೈರ್ಯಶಾಲಿ ಮಹಿಳೆಯರು ನನಗೆ ಸಿಂಧೂರ ಸಸಿಯನ್ನು ಉಡುಗೊರೆಯಾಗಿ ನೀಡಿದ್ದರು. ಇಂದು ವಿಶ್ವ ಪರಿಸರ ದಿನದಂದು, ದೆಹಲಿಯಲ್ಲಿರುವ ತಮ್ಮ ನಿವಾಸದಲ್ಲಿ ಗಿಡವನ್ನು ನೆಟ್ಟರು. ಈ ಮರವು ಯಾವಾಗಲೂ ಭಾರತದ ಮಹಿಳಾ ಶಕ್ತಿಯ ಅದಮ್ಯ ಚೈತನ್ಯ ಮತ್ತು ಸ್ಪೂರ್ತಿದಾಯಕ ಶೌರ್ಯದ ಜೀವಂತ ಸಂಕೇತವಾಗಿ ನಿಲ್ಲುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!