ಉದಯವಾಹಿನಿ, ನವದೆಹಲಿ: ಕೇಂದ್ರ ಗೃಹ ಸಚಿವಾಲಯ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆವಹಿಸಿದೆ. ಬಿಜೆಪಿ ಕಾರ್ಯಕರ್ತರು, ನಾಯಕರು ಈ ಪ್ರಕರಣದ ತನಿಖೆಯನ್ನು ಎನ್ಐಎಗೆ ಒಪ್ಪಿಸಬೇಕೆಂದು ಪಟ್ಟು ಹಿಡಿದು ಪ್ರತಿಭಟಿಸಿದ್ದರು. ಈ ಪ್ರಕರಣದ ಸಂಬಂಧ ಈಗಾಗಲೇ ಪೊಲೀಸರು 11 ಮಂದಿಯನ್ನು ಬಂದಿಸಿದ್ದರು.
