ಉದಯವಾಹಿನಿ, ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಇದೇ 19 ರಂದು ನಡೆಯಲಿರುವ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಪ್ರವಾಸಿಗರಿಗೆ ನಂದಿಬೆಟ್ಟ ಪ್ರವೇಶ ನಿರ್ಗಮಿಸಲಾಗಿದೆ.
ಇದೇ 16 ರ ಸಂಜೆ 5 ಗಂಟೆಯಿಂದ 20 ರ ಬೆಳಿಗ್ಗೆ 5 ಗಂಟೆವರೆಗೂ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಎನ್‌.ರವೀಂದ್ರ ಆದೇಶ ಹೊರಡಿಸಿದ್ದಾರೆ.

ನಂದಿಗಿರಿಧಾಮದ ಮೇಲ್ಭಾಗದಲ್ಲಿರುವ ವಸತಿ ಕೊಠಡಿಗಳನ್ನು ಸಹ ಮುಂಗಡ ಕಾಯ್ದಿರಿಸುವಿಕೆಗೂ ಕೂಡ ಸ್ಥಗಿತಗೊಳಿಸಲಾಗಿದೆ. ಇದೇ ಮೊದಲ ಬಾರಿಗೆ ನಂದಿಬೆಟ್ಟದಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಗೆ ಬೇಕಾದ ಅಗತ್ಯ ಸಿದ್ಧತೆಗಳ ಸಲುವಾಗಿ ಮೂರು ದಿನಗಳ ಮೊದಲೇ ಪ್ರವಾಸಿಗರ ಪ್ರವೇಶ ಹಾಗೂ ವಾಹನಗಳ ಸಂಚಾರಕ್ಕೆ ಬ್ರೇಕ್‌ ಹಾಕಲಾಗಿದೆ.
ಸಚಿವ ಸಂಪುಟ ಸಭೆಗೆ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಸಚಿವರು, ಶಾಸಕರು, ಇಲಾಖಾ ಮುಖ್ಯಸ್ಥರು, ಅಧಿಕಾರಿಗಳು ಆಗಮಿಸಲಿದ್ದಾರೆ. ನಂದಿಗಿರಿಧಾಮಕ್ಕೆ ಹೋಗುವುದಕ್ಕೆ ಮತ್ತು ಬರುವುದಕ್ಕೆ ಒಂದೇ ರಸ್ತೆ ಇರುವುದರಿಂದ ವಾಹನದಟ್ಟಣೆ ಹೆಚ್ಚಾಗಿರುತ್ತದೆ. ಜೊತೆಗೆ ಬೆಟ್ಟಗಳಲ್ಲಿ ಕಡಿದಾದ ತಿರುವುಗಳಿರುವುದರಿಂದ ರಸ್ತೆಗಳಲ್ಲಿ ವಾಹನ ಮತ್ತು ಪ್ರವಾಸಿಗರನ್ನು ನಿಯಂತ್ರಿಸುವುದು ಕಷ್ಟವಾಗಿರುವುದರಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.

 

Leave a Reply

Your email address will not be published. Required fields are marked *

error: Content is protected !!