ಉದಯವಾಹಿನಿ, ನವದೆಹಲಿ: ಹಕ್ಕಿ ಡಿಕ್ಕಿಯಾಗಿ ಅಹಮಾದಬಾದ್‌ನಲ್ಲಿ ಏರ್‌ ಇಂಡಿಯಾ ವಿಮಾನ ಪತನಗೊಂಡಿತಾ ಎಂಬ ಶಂಕೆ ವ್ಯಕ್ತವಾಗಿದೆ. ವಿಮಾನ ನಿಲ್ದಾಣದಿಂದ ಟೇಕಾಫ್‌ ಆಗುವಾಗ ವಿಮಾನದ ಎಂಜಿನ್‌ಗೆ ಪಕ್ಷಿ ಬಡಿದ ಕಾರಣ ಈ ದುರಂತ ಸಂಭವಿಸಬರಬಹುದು ಎಂದು ಅನುಮಾನ ವ್ಯಕ್ತವಾಗಿದೆ. ಟೇಕಾಫ್‌ ಆಗುವಾಗ ಎಂಜಿನ್‌ಗೆ ಪಕ್ಷಿ ಬಡಿದಾಗ ವಿಮಾನ ಮುಂದಕ್ಕೆ ಹೋಗಬೇಕಾದ ವೇಗ ಅಟೋಮ್ಯಾಟಿಕ್‌ ಆಗಿ ತಗ್ಗುತ್ತದೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಾಧಾರಣವಾಗಿ ವಿಮಾನದ ಒಂದು ಎಂಜಿನ್‌ಗೆ ಪಕ್ಷಿ ಬಡಿದರೆ ಇನ್ನೊಂದು ಎಂಜಿನ್‌ ಮೂಲಕ ಚಾಲನೆ ಮಾಡಿ ಸಮೀಪದ ನಿಲ್ದಾಣದಲ್ಲಿ ಪೈಲಟ್‌ ತುರ್ತು ಲ್ಯಾಂಡ್‌ ಮಾಡುತ್ತಾರೆ. ಆದರೆ ಇಲ್ಲಿ ಎರಡು ಎಂಜಿನಿಗೆ ಪಕ್ಷಿ ಬಡಿದ ಕಾರಣ ವಿಮಾನ ವೇಗವನ್ನು ಕಳೆದುಕೊಂಡು ಪತನ ಹೊಂದಿರಬಹುದು ಎಂಬ ಅನುಮಾನವನ್ನು ಹಲವರು ವ್ಯಕ್ತಪಡಿಸಿದ್ದಾರೆ. ಈ ರೀತಿ ಎರಡು ಎಂಜಿನಿಗೆ ಪಕ್ಷಿ ಬಡಿಯುವುದು ಅಪರೂಪದಲ್ಲಿ ಅಪರೂಪ.

Leave a Reply

Your email address will not be published. Required fields are marked *

error: Content is protected !!