ಉದಯವಾಹಿನಿ, ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಆರ್‌ಸಿಬಿ ಫ್ರಾಂಚೈಸಿಯ ಮಾರ್ಕೆಟಿಂಗ್ ಹೆಡ್‌ ನಿಖಿಲ್ ಸೋಸಲೆ ಹಾಗೂ ಡಿಎನ್‌ಎ ಈವೆಂಟ್‌ ಮ್ಯಾನೇಜ್ಮೆಂಟ್‌ ಸಂಸ್ಥೆಯ ಸುನೀಲ್ ಮ್ಯಾಥ್ಯೂಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣದಲ್ಲಿ ನಿಖಿಲ್ ಸೋಸಲೆ, ಸುನೀಲ್ ಮ್ಯಾಥ್ಯೂ ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ನ್ಯಾ. ಕೃಷ್ಣಕುಮಾರ್‌ ಅವರಿದ್ದ ಪೀಠ ನಿಖಿಲ್‌ ಸೋಸಲೆ, ಸುನೀಲ್‌ ಮ್ಯಾಥ್ಯೂ, ಕಿರಣ್, ಶಮಂತ್ ಎಲ್ಲರಿಗೂ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಅಲ್ಲದೇ ದೇಶ ಬಿಟ್ಟು ಹೋಗದಂತೆ ಷರತ್ತು ವಿಧಿಸಿದೆ. ಅರ್ಜಿದಾರರ ಪರ ವಕೀಲ ಸಂದೇಶ್‌ ಚೌಟ ವಾದ ಮಂಡಿಸಿದರು. ಹೈಕೋರ್ಟ್‌ನಲ್ಲಿ ಪತಿ ನಿಖಿಲ್‌ ಸೋಸಲೆ ಅಕ್ರಮ ಬಂಧನ ಪ್ರಶ್ನಿಸಿ ಪತ್ನಿ ಮಾಳವಿಕಾ ನಾಯ್ಕ್‌ ರಿಟ್‌ ಅರ್ಜಿ ಸಲ್ಲಿಸಿದ್ದರು. ಆದ್ರೆ ಎಜಿ ಶಶಿಕಿರಣ್‌ ಶೆಟ್ಟಿ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು.

Leave a Reply

Your email address will not be published. Required fields are marked *

error: Content is protected !!