ಉದಯವಾಹಿನಿ, ಶಿವಮೊಗ್ಗ: ಭಾರೀ ಮಳೆಯಿಂದ ಭೂ ಕುಸಿತ ಸಾಧ್ಯತೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಆಗುಂಬೆ ಘಾಟಿ 169ಎ ಹೆದ್ದಾರಿ ರಸ್ತೆಯಲ್ಲಿ ಸಂಚಾರ ಬಂದ್ ಮಾಡಿದ್ದು, ಭಾರೀ ವಾಹನಗಳ ಓಡಾಟಕ್ಕೆ ಜಿಲ್ಲಾಧಿಕಾರಿ ನಿಷೇಧ ಹೇರಿದ್ದಾರೆ. ಮಲ್ಪೆ – ಆಗುಂಬೆ ಹೆದ್ದಾರಿ ರಸ್ತೆಯಾಗಿರುವ ಆಗುಂಬೆ ಘಾಟಿಯಲ್ಲಿ ಭಾರೀ ಮಳೆಯಿಂದ ಭೂ ಕುಸಿತ ಸಾಧ್ಯತೆ ಹಿನ್ನೆಲೆ ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಆದೇಶ ನೀಡಿದ್ದಾರೆ.ಭಾರೀ ವಾಹನಗಳು ಉಡುಪಿ – ಕುಂದಾಪುರ – ಸಿದ್ದಾಪುರ – ಮಾಸ್ತಿಕಟ್ಟೆ – ತೀರ್ಥಹಳ್ಳಿ ಮಾರ್ಗದಲ್ಲಿ ಸಂಚರಿಸುವಂತೆ ಸೂಚನೆ ನೀಡಿದ್ದು, ಆಗುಂಬೆ ಘಾಟಿಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗಿದೆ.

 

Leave a Reply

Your email address will not be published. Required fields are marked *

error: Content is protected !!