ಉದಯಯವಾಹಿನಿ, ಮುಂಬೈ: ಪುಣೆಯಲ್ಲಿ ಇಂದ್ರಯಾಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸೇತುವೆ ಕುಸಿದು ಕನಿಷ್ಠ 20 ರಿಂದ 25 ಮಂದಿ ನೀರಿನಲ್ಲೇ ಕೊಚ್ಚಿಹೋಗಿದ್ದಾರೆಂದು ವರದಿಯಾಗಿದೆ. ಲೆಗಾಂವ್ ಪ್ರದೇಶದ ಕುಂಡ್ಮಾಲ್ ಬಳಿ ಇಂದ್ರಯಾಣಿ ನದಿಗೆ ಕಟ್ಟಲಾಗಿದ್ದ ನಿರ್ಮಿಸಿದ್ದ ಹಳೆಯ ಸೇತುವೆ ಕೊಚ್ಚಿ ಹೋಗಿದೆ.‌ ಮಳೆಯ ಆರ್ಭಟ ಜೋರಾದ ಹಿನ್ನೆಲೆ ಪ್ರವಾಹ ಉಂಟಾಗಿದ್ದು ದುರ್ಘಟನೆ ಸಂಭವಿಸಿದೆ. ಕನಿಷ್ಠ 20 ರಿಂದ 25 ಮಂದಿಯಲ್ಲೇ ಕೊಚ್ಚಿ ಹೋಗಿದ್ದಾರೆ ಎಂದು ಜಿಲ್ಲಾಡಳಿತ ಆತಂಕ ವ್ಯಕ್ತಪಡಿಸಿದೆ.

ಕೆಲವು ತಿಂಗಳಿನಿಂದ ಈ ಸೇತುವೆ ಶಿಥಿಲಾವಸ್ಥೆಯಲ್ಲಿತ್ತು. ಹಾಗಾಗಿ ಸೇತುವೆ ಮೇಲೆ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಆದ್ರೆ ಇತ್ತೀಚೆಗೆ ಭಾರೀ ಮಳೆಯಿಂದ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿತ್ತು. ಇಂದು ಇದ್ದಕ್ಕಿದ್ದಂತೆ ಪ್ರವಾಹ ಉಂಟಾಗಿದ್ದು, ಸೇತುವೆ ಕುಸಿದಿದೆ.  ಸೇತುವೆ ಮೇಲೆ ನದಿ ವೀಕ್ಷಣೆ ಮಾಡುತ್ತಿದ್ದ 20-25 ಮಂದಿ ನದಿಯಲ್ಲೇ ಕೊಚ್ಚಿ ಹೋಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ತಿಳಿದ ಕೂಡಲೇ ಸ್ಥಳೀಯ ಪೊಲೀಸ್‌ ಅಧಿಕಾರಿಗಳು ,ಜಿಲ್ಲಾಡಳಿತದ ರಕ್ಷಣಾ ತಂಡಗಳೊಂದಿಗೆ ಸ್ಥಳಕ್ಕೆ ಧಾವಿಸಿದೆ. ಸ್ಥಳೀಯರು ನದಿಯ ಬಳಿ ಸುಳಿಯದಂತೆ ಮುನ್ನೆಚ್ಚರಿಕೆ ಕೊಡಲಾಗಿದೆ.

Leave a Reply

Your email address will not be published. Required fields are marked *

error: Content is protected !!