ಉದಯವಾಹಿನಿ, ಮುಂಬೈ: ಮರಾಠಿ ಕಲಿಯುವುದಿಲ್ಲ ಎಂದು ಹೇಳಿದ ಉದ್ಯಮಿಯೊಬ್ಬರ ಕಚೇರಿಯನ್ನು ರಾಜ್‌ ಠಾಕ್ರೆಯ ಎಂಎನ್‌ಎಸ್‌ ಕಾರ್ಯಕರ್ತರು ಧ್ವಂಸ ಮಾಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಉದ್ಯಮಿ ಸುಶಿಲ್‌ ಕೇಡಿಯಾ ಅವರ ಕಚೇರಿ ಧ್ವಂಸದ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ರಾಜ್ ಠಾಕ್ರೆ ಬೆಂಬಲಿಗರು ಕಚೇರಿಯ ಮೇಲೆ ಇಟ್ಟಿಗೆಯಂಥ ವಸ್ತುಗಳನ್ನು ಎಸೆಯುತ್ತಿರುವುದು ದೃಶ್ಯದಲ್ಲಿದೆ. ದಾಳಿಯನ್ನು ತಡೆಯಲು ಭದ್ರತಾ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದರೂ, ವಿಧ್ವಂಸಕ ಕೃತ್ಯ ತಡೆಯಲಾಗಿಲ್ಲ.
ಸುಶಿಲ್‌ ಕೇಡಿಯಾ ಅವರು ತಮ್ಮ X ಖಾತೆಯಲ್ಲಿ, 30 ವರ್ಷಗಳಿಂದ ಮುಂಬೈನಲ್ಲಿ ವಾಸಿಸುತ್ತಿದ್ದರೂ ನನಗೆ ಮರಾಠಿ ಸರಿಯಾಗಿ ತಿಳಿದಿಲ್ಲ. ನಿಮ್ಮ ಘೋರ ದುಷ್ಕೃತ್ಯಗಳ ಬಗ್ಗೆ ತಿಳಿದಿದೆ. ನಾನು ಮರಾಠಿ ಕಲಿಯುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದೇನೆ. ನೀವು ಏನು ಮಾಡುತ್ತೀರಿ ಎಂದು ರಾಜ್‌ ಠಾಕ್ರೆ ಅವರಿಗೆ ಟ್ಯಾಗ್‌ ಮಾಡಿ ಪೋಸ್ಟ್‌ ಹಾಕಿದ್ದಾರೆ.
ತನಗೆ ಭದ್ರತೆ ಒದಗಿಸುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಒತ್ತಾಯಿಸಿದ್ದಾರೆ. ಅಂಬೋಲಿ, ಸೈಬರ್ ಕ್ರೈಂ ಬಾಂದ್ರಾ, SB1 ಹಲವಾರು ಪೊಲೀಸ್ ಠಾಣೆಗಳಿಂದ ನನಗೆ ಕರೆ ಬರುತ್ತಿದೆ ಎಂದು ಉದ್ಯಮಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!