ಉದಯವಾಹಿನಿ, ನವದೆಹಲಿ: ರಾಜಕೀಯ ನಿವೃತ್ತಿ ಬಳಿಕ ವೇದ, ಉಪನಿಷತ್ ಮತ್ತು ಸಾವಯವ ಕೃಷಿಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ.ರಾಜಸ್ಥಾನದಲ್ಲಿ ಸಹಕಾರ್ ಸಂವಾದ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ವೇಳೆ, ‘ನಾನು ನನ್ನ ನಿವೃತ್ತಿ ಜೀವನದ ಬಗ್ಗೆ ಯೋಚಿಸಿದ್ದೇನೆ. ರಾಜಕೀಯದಿಂದ ನಿವೃತ್ತಿ ಪಡೆದ ಬಳಿಕ ಮುಂದಿನ ಜೀವನವನ್ನು ವೇದಗಳ ಪಠಣ, ಉಪನಿಷತ್ ಪಾರಾಯಣ ಮತ್ತು ಸಾವಯವ ಕೃಷಿಯಲ್ಲಿ ತೊಡಗಿಕೊಳ್ಳಲಿದ್ದೇನೆ’ ಎಂದಿದ್ದಾರೆ.ಅಮಿತ್‌ ಶಾ ಅವರು ಓದುವ ಹವ್ಯಾಸ ಸಹ ಇದೆ. ಸುಮಾರು 8,000 ಪುಸ್ತಕಗಳನ್ನು ಅವರು ಹೊಂದಿದ್ದಾರೆ. ಸದ್ಯ ಅವುಗಳನ್ನು ಓದಲು ಸಮಯವಿಲ್ಲ ಎಂದು ಹೇಳಿಕೊಂಡಿದ್ದಾರೆ. ಅವರಿಗೆ ಶಾಸ್ತ್ರೀಯ ಸಂಗೀತದ ಬಗ್ಗೆಯೂ ಒಲವಿದೆ. ರಾಸಾಯನಿಕ ಗೊಬ್ಬರಗಳಿಂದ ಬೆಳೆದ ಗೋಧಿ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಇದರಿಂದ ಬಿಪಿ (ರಕ್ತದೊತ್ತಡ), ಮಧುಮೇಹ, ಥೈರಾಯ್ಡ್ ಮತ್ತು ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಗಳು ಬರುತ್ತವೆ. ನೈಸರ್ಗಿಕ ಕೃಷಿ ದೇಹವನ್ನು ರೋಗ ಮುಕ್ತಗೊಳಿಸಲು ಸಹಾಯ ಮಾಡುತ್ತದೆ ಮಾತ್ರವಲ್ಲದೆ ಔಷಧಿಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುತ್ತದೆ ಎಂದಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!