ಉದಯವಾಹಿನಿ, ಮುಂಬೈ: ಮಗಳ ಸ್ಕೂಲ್ ಫೀಸ್ ಮರುಪಾವತಿಸುವಂತೆ ಕೇಳಿದ ರೈತನನ್ನು ಶಾಲೆಯ ಆಡಳಿತ ಮಂಡಳಿಯ ಮುಖ್ಯಸ್ಥ ಹಾಗೂ ಆತನ ಪತ್ನಿ ಹಿಗ್ಗಾಮುಗ್ಗಾ ಥಳಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ನಡೆದಿದೆ. ಜಗನ್ನಾಥ್ ಹೆಂಗ್ಡೆ (46) ಮೃತ ರೈತ ಎಂದು ಗುರುತಿಸಲಾಗಿದೆ. ಪೂರ್ಣದ ಝೀರೋ ಫಾಟಾ ಪ್ರದೇಶದಲ್ಲಿರುವ ವಸತಿ ಶಾಲೆಯೊಂದರಲ್ಲಿ ಅವರ ಮಗಳು ವ್ಯಾಸಂಗ ಮಾಡುತ್ತಿದ್ದಳು.
ಬಳಿಕ ಕಾರಣಾಂತರಗಳಿಂದ ಮಗಳನ್ನು ಬೇರೆ ಶಾಲೆಗೆ ಸೇರಿಸಿದ್ದರು. ಆದ್ದರಿಂದ ಜಗನ್ನಾಥ್ ಹೆಂಗ್ಡೆ ಅವರು ಮಗಳ ಶಾಲಾ ಶುಲ್ಕ ಮರುಪಾವತಿ ಮತ್ತು ವರ್ಗಾವಣೆ ಪ್ರಮಾಣಪತ್ರವನ್ನು ಕೇಳಲು ಹೋಗಿದ್ದರು. ಅವರು ಶಾಲೆಯ ಪೂರ್ತಿ ಶುಲ್ಕ ಪಾವತಿಸದ್ದರಿಂದ ಆಡಳಿತ ಮಂಡಳಿ ಮುಖ್ಯಸ್ಥ ಹಾಗೂ ಆತನ ಪತ್ನಿ ತರಾಟೆಗೆ ತೆಗೆದುಕೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!