ಉದಯವಾಹಿನಿ, ಬೆಳಗಾವಿ : ಕೀಟನಾಶಕ ಮಿಶ್ರಿತ ನೀರು ಕುಡಿದು ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ 12 ಮಂದಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಶಾಲೆಯ ನೀರಿನ ಟ್ಯಾಂಕ್ಗೆ ಯಾರೋ ಕೀಟನಾಶಕ ಬೆರೆಸಿದ್ದಾರೆ ಎಂದು ಶಾಲಾ ಸಿಬ್ಬಂದಿ ಅನುಮಾನ ವ್ಯಕ್ತಪಡಿಸಿದ್ದಾರೆ. ಅಸ್ವಸ್ಥಗೊಂಡಿದ್ದ 12 ಮಂದಿ ಮಕಳ್ಳನ್ನು ಸವದತ್ತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಡಿಹೆಚ್ಒ ಈಶ್ವರ್ ಗಡಾದ್, ಡಿಡಿಪಿಐ ಲೀಲಾವತಿ ಹಿರೇಮಠ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದDHO ಗಡಾದ್ 12 ಮಂದಿ ಮಕ್ಕಳ ಆರೋಗ್ಯ ಸದ್ಯ ಚೇತರಿಕೆ ಕಂಡುಬಂದಿದೆ. ಪೊಲೀಸರು ತನಿಖೆ ಮಾಡುತ್ತಿದ್ದಾರೆ.
