ಉದಯವಾಹಿನಿ,ಉಡುಪಿ : ಇತ್ತೀಚಿಗಷ್ಟೇ ಬ್ರಹ್ಮಾವರ ತಾಲೂಕು ಕುಂಜಾಲುವಿನಲ್ಲಿ ಹಸುವಿನ (Cow) ರುಂಡ ಪತ್ತೆಯಾಗಿತ್ತು. ಈ ಬೆನ್ನಲ್ಲೇ ಉಡುಪಿ (Udupi) ಜಿಲ್ಲೆಯ ಕಾರ್ಕಳ (Karkala) ತಾಲೂಕಿನ ಮಲೆಬೆಟ್ಟು ದುರ್ಗಾ ಗ್ರಾಮ ಪಂಚಾಯತ್ ವ್ಯಪ್ತಿಯ ನಿರ್ಜನ ಪ್ರದೇಶದಲ್ಲಿ ಹಸುವಿನ ತಲೆ ಬರುಡೆ ಮತ್ತು ಇತರ ಭಾಗಗಳು ಪತ್ತೆಯಾಗಿವೆ. ಹಸು ದೇಹದ ಭಾಗಗಳು ಸ್ವರ್ಣಾ ನದಿಯಲ್ಲಿ ತೇಲಿ ಬಂದಿರುವ ಸಾಧ್ಯತೆ ಇದೆ. ಈ ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ಹಿಂದೂ ಪರ ಸಂಘಟನೆ ಕಾರ್ಯಕರ್ತರು ದೌಡಾಯಿಸಿದರು. ಕಾರ್ಕಳ ಪೊಲೀಸರು ಸಹಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಾಳ, ಕಡಾರಿ, ಎಸ್.ಕೆ.ಬಾರ್ಡರ್ ಬಳಿ ಅಕ್ರಮ ಕಸಾಯಿಖಾನೆ ಇರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಮನ ದೇವಸ್ಥಾನದ ಬಳಿ ಹಸುವಿನ ರುಂಡ ಪತ್ತೆ: ಬ್ರಹ್ಮಾವರ ತಾಲೂಕಿನ ಕುಂಜಾಲು ರಾಮ ಮಂದಿರದ ಬಳಿ ಕಳೆದ ತಿಂಗಳು ಗೋವಿನ ರುಂಡ ಪತ್ತೆಯಾಗಿತ್ತು. ಘಟನೆ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆಗೆ ಉಡುಪಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್‌ ಅವರು ನಾಲ್ಕು ತಂಡಗಳನ್ನು ರಚಿಸಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಘಟನೆ ನಡೆದು 24 ಗಂಟೆಯೊಳಗಾಗಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಗರ್ಭ ಧರಿಸಿದ್ದ ಹಸುವಿನ ತಲೆಯನ್ನೇ ಕಡೆಯಲಾಗಿತ್ತು. ಹೊಟ್ಟೆಯೊಳಗಿದ್ದ ಕರುವನ್ನು ಹೊರತೆಗೆದು ಹಸುವಿನ ದೇಹ ಎತ್ತುಕೊಂಡು ಹೋಗಿದ್ದರು. ಇತ್ತೀಚೆಗೆ ಬೆಂಗಳೂರು ದಕ್ಷಿಣ ತಾಲೂಕಿನ ಸೂಲಿವಾರ ಗ್ರಾಮದಲ್ಲಿ ಹಾಲಿನ ಡೈರಿ ಅಧ್ಯಕ್ಷರಿಗೆ ಸೇರಿದ್ದ ಹಸುವಿನ ಕೆಚ್ಚಲು ಕೊಯ್ದು ದುಷ್ಕರ್ಮಿಗಳು ಕ್ರೌರ್ಯ ಮೆರೆದಿರುವಂತಹ ಘಟನೆ ನಡೆದಿತ್ತು. ಇದಕ್ಕೂ ಮುನ್ನ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ಯಲಾಗಿತ್ತು.

Leave a Reply

Your email address will not be published. Required fields are marked *

error: Content is protected !!