ಉದಯವಾಹಿನಿ, ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಆಪರೇಷನ್‌ ಸಿಂಧೂರ ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು ಸರ್ಕಾರ ಮುಕ್ತವಾಗಿದೆ ಎಂದು ಕೇಂದ್ರ ಸಚಿವ ಕಿರಣ್‌ ರಿಜಿಜು ತಿಳಿಸಿದ್ದಾರೆ.ಅಧಿವೇಶನಕ್ಕೆ ಮುಂಚಿತವಾಗಿ ಕರೆಯಲ್ಪಟ್ಟ ಎಲ್ಲಾ ಪಕ್ಷದ ಸಭೆಯಲ್ಲಿ ಮಾತನಾಡಿದ ರಿಜಿಜು, ಸದನದ ಸುಗಮ ಕಾರ್ಯವನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಹೆಚ್ಚಿನ ಸಮನ್ವಯ ಸಾಧಿಸಬೇಕೆಂದು ಹೇಳಿದ್ದಾರೆ.ಸಂಸತ್ತಿನಲ್ಲಿ ಆಪರೇಷನ್ ಸಿಂಧೂರದಂತಹ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು ನಾವು ತುಂಬಾ ಮುಕ್ತರಾಗಿದ್ದೇವೆ. ಸಂಸತ್ತನ್ನು ಸರಾಗವಾಗಿ ನಡೆಸುವಲ್ಲಿ ಸರ್ಕಾರಿ-ಆಪರೀಟಿ ಸಮನ್ವಯ ಇರಬೇಕು ಎಂದಿದ್ದಾರೆ.
ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತ ಮತ್ತು ಪಾಕಿಸ್ತಾನದ ನಡುವೆ ಮಧ್ಯಸ್ಥಿಕೆ ವಹಿಸಿದ್ದೇನೆಂದು ನೀಡಿರುವ ಹೇಳಿಕೆಯು ಸಹ ಸಾಕಷ್ಟು ವಿವಾದ ಹುಟ್ಟುಹಾಕಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ರಿಜಿಜು, ಸರ್ಕಾರವು ಸದನದಲ್ಲಿ ಎಲ್ಲದಕ್ಕೂ ಉತ್ತರಿಸಲಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!