ಉದಯವಾಹಿನಿ, ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ದ ಕಿಶ್ತ್ವಾರ್ ಜಿಲ್ಲೆಯ ಹದಲ್‌ ಗಲ್‌ ಪ್ರದೇಶದಲ್ಲಿ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ಆರಂಭವಾಗಿದೆ “ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಭಾರತೀಯ ಸೇನೆಯು ಕಿಶ್ತ್ವಾರ್ ಸೆಕ್ಟರ್‌ನ ಹದಲ್ ಗಲ್ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಭಯೋತ್ಪಾದಕರನ್ನು ಹಿಮ್ಮೆಟ್ಟಿಸಲಾಗುತ್ತಿದೆ. ಕಾರ್ಯಾಚರಣೆ ಮುಂದುವರಿದಿದೆ” ಎಂದು ಜಮ್ಮು ಮೂಲದ ವೈಟ್ ನೈಟ್ ಕಾರ್ಪ್ಸ್ ಎಕ್ಸ್‌ನಲ್ಲಿ ತಿಳಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಲಾಗುತ್ತಿದೆ.
ಭಯೋತ್ಪಾದಕರ ಚಲನವಲನದ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಭಾರತೀಯ ಸೇನೆಯ ಸಹಾಯದಿಂದ ಡಚ್ಚನ್ ಮತ್ತು ನಾಗಸೇನಿ ನಡುವಿನ ಖಾಂಕೂ ಅರಣ್ಯ ಸುತ್ತುವರಿದು ಶೋಧ ಕಾರ್ಯಾಚರಣೆಯನ್ನು ಆರಂಭಿಸಿದಾಗ ಗುಂಡಿನ ಚಕಮಕಿ ಆರಂಭವಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹೆಚ್ಚುವರಿ ಪಡೆಗಳ ರವಾನೆ: ಅಡಗಿಕೊಂಡಿದ್ದ ಭಯೋತ್ಪಾದಕರು ಆರಂಭದಲ್ಲಿ ಭದ್ರತಾ ಪಡೆಗಳತ್ತ ಗುಂಡು ಹಾರಿಸಿದರು ಎನ್ನಲಾಗಿದೆ. ಗುಂಡಿನ ಚಕಮಕಿ ಮುಂದುವರಿದಿದ್ದು ಯಾವುದೇ ಸಾವುನೋವು ನಡೆದ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರದೇಶಕ್ಕೆ ಹೆಚ್ಚುವರಿ ಪಡೆಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ ಎಂದು ಹೇಳಿದರು. ಏಪ್ರಿಲ್‌ನಲ್ಲಿ ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ದಾಳಿಯ ಬಳಿಕ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯನ್ನು ಬಿಗಿಗೊಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!