ಉದಯವಾಹಿನಿ, ಶಿವಮೊಗ್ಗ: ಹೊಸನಗರ ತಾಲೂಕಿನ ಅಬ್ಬಿ ಫಾಲ್ಸ್ನಲ್ಲಿ ಫೋಟೋ ತೆಗೆಸಿಕೊಳ್ಳಲು ಹೋಗಿ ಬೆಂಗಳೂರು ಮೂಲದ ಪ್ರವಾಸಿಗನೊಬ್ಬ ನೀರುಪಾಲಾಗಿದ್ದಾನೆ.ಮೃತನನ್ನು ಬೆಂಗಳೂರಿನ ನಾಗರಬಾವಿಯ ಖಾಸಗಿ ಕಂಪನಿಯೊಂದರ ಮ್ಯಾನೇಜರ್ ರಮೇಶ್ (35) ಎಂದು ಗುರುತಿಸಲಾಗಿದೆ. ತಮ್ಮ ಐವರು ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದಾಗ ಈ ಅವಘಡ ಸಂಭವಿಸಿದೆ. ಅಬ್ಬಿ ಫಾಲ್ಸ್ನಲ್ಲಿ ಫೋಟೋಗೆ ಪೋಸ್ ನೀಡುವಾಗ ಫಾಲ್ಸ್ಗೆ ಇಳಿದಿದ್ದಾರೆ. ಈ ವೇಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.
ಫಾಲ್ಸ್ನಲ್ಲಿ ರಮೇಶ್ ಕಣ್ಮರೆಯಾಗುವ 20 ಸೆಕೆಂಡ್ನ ವಿಡಿಯೋ ವೈರಲ್ ಆಗಿದೆ. ವಿಡಿಯೋದಲ್ಲಿ ರಮೇಶ್ ಬಂಡೆ ಮೇಲೆ ಕುಳಿತಿರುತ್ತಾರೆ. ವಿಡಿಯೋದ ಆರಂಭದಲ್ಲಿ ತಮ್ಮ ಎರಡು ಕೈಗಳನ್ನು ಮೇಲೆತ್ತಿ ಸಂಭ್ರಮಿಸುತ್ತಾರೆ. ನಂತರ ತಾನು ಕುಳಿತಿದ್ದ ಬಂಡೆಯಿಂದ ಕೆಳಗಿಳಿಯುತ್ತಾರೆ. ಈ ವೇಳೆ, ನೀರಿನ ರಭಸಕ್ಕೆ ರಮೇಶ್ ತೇಲಿ ಹೋಗಿದ್ದಾರೆ. ಕೊಚ್ಚಿಹೋಗುತ್ತಿದ್ದಂತೆ ಸ್ನೇಹಿತರು ಕೂಗಿಕೊಳ್ಳುವುದು ವಿಡಿಯೋ ರೆಕಾರ್ಡ್ ಆಗಿದೆ.
