ಉದಯವಾಹಿನಿ, ಈಗ ಎಲ್ಲೆಲ್ಲೂ ಆ್ಯಂಕರ್​ ಅನುಶ್ರೀ ಅವರ ಮದುವೆಯ ಸುದ್ದಿಯೇ ಹರಿದಾಡುತ್ತಿದೆ. ಇದುವರೆಗೆ ಅವರು ಈ ಬಗ್ಗೆ ಎಲ್ಲಿಯೂ ಹೇಳಿಕೊಂಡಿಲ್ಲ. ಇದು ನಿಜವೇ ಆಗಿದ್ದಲ್ಲಿ, ಸದ್ಯ ಆ್ಯಂಕರ್​ ಅನುಶ್ರೀ ಅವರು ಸದ್ಯ ಮದುವೆಯ ಮೂಡ್​ನಲ್ಲಿ ಇದ್ದಾರೆ. ಅಷ್ಟಕ್ಕೂ ಆ್ಯಂಕರ್​ ಅನುಶ್ರೀ ಎಂದರೆ ಸಾಕು, ಅವರ ಅಸಂಖ್ಯ ಅಭಿಮಾನಿಗಳಿಗೆ ಒಂದೇ ಚಿಂತೆ. ಅದು ಅವರ ಮದುವೆಯ ಬಗ್ಗೆಯಾಗಿತ್ತು. ಅನುಶ್ರೀ ಅವರು ತಲೆ ಕೆಡಿಸಿಕೊಳ್ಳದಷ್ಟು ಹೆಚ್ಚು ತಲೆ ಕೆಡಿಸಿಕೊಂಡಿದ್ದರು ಅವರ ಫ್ಯಾನ್ಸ್​. ಇದೇ ವರ್ಷ ತಮ್ಮ ಮದುವೆ ಆಗುತ್ತದೆ ಎನ್ನುವ ಮೂಲಕ, ಹಲವು ವರ್ಷಗಳಿಂದ ಅಭಿಮಾನಿಗಳು ಕೇಳ್ತಿದ್ದ ಪ್ರಶ್ನೆಗೆ ಉತ್ತರ ಕೊಟ್ಟಿದ್ದರು ನಟಿ. ಕಾರ್ಯಕ್ರಮವೊಂದರಲ್ಲಿ ನಟಿ ಮಲೈಕಾ ವಸುಪಾಲ್​ ಅವರು ನಿಮ್ಮ ಗಂಡ ಹೇಗಿರಬೇಕು ಎಂದು ಅನುಶ್ರೀ ಅವರನ್ನು ಪ್ರಶ್ನಿಸಿದ್ದಾಗ, ಅನುಶ್ರೀ ಅವರು, ಹುಡುಗ ಬಹಳ ರೆಸ್ಪಾನ್ಸಿಬಲ್ ಆಗಿರಬೇಕು. ನನ್ನ ಪರವಾಗಿ ಅಲ್ಲ, ಅವನ ಲೈಫ್ ಬಗ್ಗೆ ರೆಸ್ಪಾನ್ಸಿಬಲ್ ಆಗಿದ್ರೆ ಸಾಕು. ಅವನು ಬದುಕಬೇಕು, ನನ್ನನ್ನು ಬದುಕೋಕೆ ಬಿಡಬೇಕು ಎಂದಿದ್ದರು. ಈ ವರ್ಷ ‘ಅನುಪತಿ’ ಬಂದೇ ಬರ್ತಾನೆ ಎಂದೂ ಹೇಳಿದ್ದರು. ಅದೇ ರೀತಿ ಅನುಶ್ರೀ ಅವರ ಮದುವೆ ಆಗಸ್ಟ್​ 28ರಂದು ಮದುವೆಯಾಗುತ್ತಿರುವುದಾಗಿ ಹೇಳಲಾಗಿದೆ. ಅವರ ಹುಡುಗನ ಬಗ್ಗೆಯೂ ಇದಾಗಲೇ ರಿವೀಲ್​ ಆಗಿದೆ.

ಆದರೆ, ಅನುಶ್ರೀ ಅವರು ಇದುವರೆಗೂ ಈ ಬಗ್ಗೆ ಬಾಯಿ ಬಿಟ್ಟಿಲ್ಲ. ಅವರ ಇನ್​ಸ್ಟಾಗ್ರಾಮ್​ ಖಾತೆಯನ್ನು ವಿಸಿಟ್​ ಮಾಡುವವರ ಸಂಖ್ಯೆ ಹೆಚ್ಚುತ್ತಿದೆ. ಇದು ಗೊತ್ತಿದ್ದೇ ಅನುಶ್ರೀ ಅವರು ಇದೀಗ ಡಾ.ರಾಜ್​ಕುಮಾರ್​ ಅವರ ಪೋಸ್ಟ್​ ಒಂದನ್ನು ಹಾಕಿದ್ದಾರೆ. ಅದರಲ್ಲಿ, ಡಾ.ರಾಜ್​ಕುಮಾರ್​ ಅವರು ಸಿನಿಮಾದ ಡೈಲಾಗ್​ ಒಂದಿದೆ. ಹಿನ್ನೆಲೆಯಲ್ಲಿ ನಟಿ ಅಳುತ್ತಿರುವುದನ್ನು ಕೇಳಿಸಿಕೊಳ್ಳಬಹುದು. ಆಗ ರಾಜ್​ ಅವರು, ಈ ಆಡಿಕೊಳ್ಳುವವರ ಬಾಯಿಗೆ ಬೀಗ ಹಾಕೋದಕ್ಕೆ ನಮ್ಮಿಂದ ಸಾಧ್ಯವಿಲ್ಲ. ಒಳ್ಳಯವರಾಗಿದ್ರೂ ಆಡ್ಕೋತಾರೆ, ಕೆಟ್ಟವರಾಗಿದ್ರೂ ಆಡ್ಕೋತಾರೆ. ಈ ಆಡ್ಕೋಳೋದು, ಅನ್ನೋದು ಮನುಷ್ಯನಿಗೆ ಒಂಥರಾ ಕಾಯಿಲೆ ಇದ್ದಹಾಗೆ. ಇದಕ್ಕೆ ಔಷಧಿನೇ ಇಲ್ಲ ಎಂದಿದ್ದಾರೆ. ಹಾಗಿದ್ದರೆ ಅನುಶ್ರೀ ಹೀಗೆ ಹೇಳಿದ್ದು ಯಾಕೆ ಎನ್ನುವ ಚರ್ಚೆ ಶುರುವಾಗಿದೆ. ಅನುಶ್ರೀ ಅವರು ಈ ವರ್ಷವೇ ಮದುವೆಯಾಗುತ್ತೇನೆ ಎಂದಿದ್ದು ಸುಳ್ಳಲ್ಲ. ಪುನೀತ್​ ರಾಜ್​ಕುಮಾರ್​ ತೋರಿಸಿದ ಹುಡುಗನ ಜೊತೆ ಅವರ ಮದುವೆ ಎಂದು ಹೇಳಲಾಗುತ್ತಿದೆ. ಕೈಗೆ ಬ್ಯಾಂಡೇಜ್​ ಮಾಡಿಕೊಂಡ ಯುವಕ, ಅನುಶ್ರೀ ಅವರ ಭಾವಿ ಪತಿ ಎನ್ನಲಾಗುತ್ತಿದೆ. ಆದರೆ ಇದುವರೆಗೆ ಅನುಶ್ರೀಯಾಗಲೀ, ಅವರ ಕುಟುಂಬಸ್ಥರಾಗಲೀ ಎಲ್ಲಿಯೂ ಅಧಿಕೃತ ಮಾಹಿತಿ ಕೊಟ್ಟಿಲ್ಲ.

Leave a Reply

Your email address will not be published. Required fields are marked *

error: Content is protected !!