ಉದಯವಾಹಿನಿ, ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಫಲಾನುಭವಿಗಳಾಗಲು ರಾಜ್ಯದ ಜನತೆ ಅರ್ಜಿ ಸಲ್ಲಿಸಲು ಮುಂದಾಗುತ್ತಿರುವುದರಿಂದ ಸರ್ವರ್ ಡೌನ್ ಸಮಸ್ಯೆ ಎದುರಾಗುತ್ತಿದೆ. ಹೀಗಾಗಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದೆ. ಅಕ್ಕಿ ವಿಚಾರದಲ್ಲಿ ಕೇಂದ್ರದ ಜೊತೆ ವಾಗ್ವಾದಕ್ಕಿಳಿದ ಕಾಂಗ್ರೆಸ್ ಸರ್ಕಾರ ಇದೀಗ ಸರ್ವರ್ ಡೌನ್ ಸಮಸ್ಯೆಗೆ ಕೇಂದ್ರ ಸರ್ಕಾರ ಕಾರಣ ಎಂದು ಆರೋಪಿಸುತ್ತಿದೆ. ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು, ರಾಜ್ಯದ ಸರ್ವರ್ ಗಳನ್ನು ಕೇಂದ್ರ ಸರ್ಕಾರವು ಹ್ಯಾಕ್ ಮಾಡಿದೆ.

ಹೀಗಾಗಿ ಸರ್ವರ್ ಡೌನ್ ಸಮಸ್ಯೆ ಎದುರಾಗುತ್ತಿದೆ ಎಂದು ಹೇಳುವ ಮೂಲಕ ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ್ದಾರೆ. ಪೂರ್ವ ಯೋಜನೆ ಮಾಡದೆ ಯೋಜನಗಳನ್ನು ಜಾರಿಗೆ ತರುತ್ತಿದ್ದಾರೆ ಎಂಬ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಕ್ಕೆ ತಿರುಗೇಟು ನೀಡಿದ ಸತೀಶ್ ಜಾರಕಿಹೊಳಿ, ನಾವು ಉತ್ತಮವಾಗಿ ಪ್ಲಾನ್ ಮಾಡಿದ್ದೇವೆ. ಆದರೆ ನಮ್ಮ ಸಿಸ್ಟಮ್ ಗಳನ್ನು ಹ್ಯಾಕ್ ಮಾಡಿ ಕೇಂದ್ರದವರು ಸ್ಥಗಿತ ಮಾಡಿದ್ದಾರೆ. ಇವಿಎಂ ರೀತಿಯಲ್ಲಿ ಹ್ಯಾಕ್ ಮಾಡಲಾಗಿದೆ. ಇನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಡಿಪಾರ್ಟ್‌ಮೆಂಟ್ ಕೂಡ ಹ್ಯಾಕ್ ಆಗಿದೆ ಹೀಗಾಗಿ ತಡವಾಗುತ್ತಿದೆ. ಅದನ್ನ ಸರಿ ಮಾಡಲು ಪ್ರಯತ್ನ ಮಾಡುತ್ತಿದ್ದೇವೆ. ಎಷ್ಟೇ ಹ್ಯಾಕ್ ಮಾಡಿದರೂ ನಮ್ಮ ಯೋಜನೆ ಜಾರಿಗೆ ತರುತ್ತೇವೆ‌ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!