ಉದಯವಾಹಿನಿ, ಅದು 2000ನೇ ಇಸ್ವಿಯ ಭೀಮನ ಅಮವಾಸ್ಯೆ. ರಾಜ್​ಕುಮಾರ್ ಅಂದು ತಿರುಪತಿಗೆ ಹೊಗಿ ಪೂಜೆ ಸಲ್ಲಿಸಿ, ನೇರವಾಗಿ ಬಂದಿದ್ದು ತಮ್ಮ ಹುಟ್ಟೂರಾದ ಗಾಜನೂರಿಗೆ. ಆ ದಿನ ರಾತ್ರಿ ಎಲ್ಲೆಲ್ಲೂ ಕತ್ತಲು ಆವರಿಸಿತ್ತು. ಆ ಊರಿನ ಮನೆಯಲ್ಲಿ ಅಲ್ಲೊಂದು, ಇಲ್ಲೊಂದು ಚಿಮಣಿ ದೀಪ ಉರಿಯುತ್ತಿತ್ತು. ರಾಜ್​ಕುಮಾರ್ ಊಟ ಮುಗಿಸಿ ಕುಳಿತಿದ್ದರು. ‘ನಮಗೆ ಸರ್ ಬೇಕು’ ಎಂಬ ಧ್ವನಿ ಹೊರಗಿನಿಂದ ಬಂತು. ಎಲ್ಲರೂ ತಮಿಳಿನಲ್ಲಿ ಮಾತನಾಡುತ್ತಿದ್ದರು. ಹೊರಗೆ ಹೋಗಿ ನೋಡಿದರೆ 15 ಜನರಿದ್ದರು. ಅವರಲ್ಲಿ ಕಾಡುಗಳ್ಳ ವೀರಪ್ಪನ ಕೂಡ ಇದ್ದ. ರಾಜ್​ ಕುಮಾರ್, ನಾಗಪ್ಪ, ಎಸ್​ಎ ಗೋವಿಂದರಾಜು, ನಾಗೇಶ್ ಅವರುಗಳನ್ನು ಅಪಹರಿಸಿ ಕರೆದುಕೊಂಡು ಹೋಗಲಾಯಿತು.

ಅಪಹರಣ ಮತ್ತು ಬೇಡಿಕೆ : ಜುಲೈ 30ರಂದು ಈ ಅಪಹರಣ ನಡೆಯಿತು. ರಾಜ್​ಕುಮಾರ್ ಅವರು ಅಪಹರಣ ಆಗುವ ವೇಳೆ ಪಾರ್ವತಮ್ಮಗೆ ಕ್ಯಾಸೆಟ್ ಒಂದನ್ನು ನೀಡಿದ್ದರು. ಈ ಕ್ಯಾಸೆಟ್​ನ ಕೊಟ್ಟಿದ್ದು ವೀರಪ್ಪನ್. ಅದರಲ್ಲಿ ತಮ್ಮ ಬೇಡಿಕೆ ಈಡೇರಿಸಲು ಕೋರಿಕೆ ಇಡಲಾಯಿತು. ನಕ್ಕೀರನ್ ಗೋಪಾಲನ್ ಹೊರಗಿನ ಜಗತ್ತಿಗೂ ಹಾಗೂ ವೀರಪ್ಪನ್​ಗೂ ಮಧ್ಯವರ್ತಿ ಆದ. ಸರ್ಕಾರದ ಎದುರು ವೀರಪ್ಪನ್ ಇಡುತ್ತಿದ್ದ ಬೇಡಿಕೆಗಳು ದೊಡ್ಡ ಮಟ್ಟದಲ್ಲೇ ಇದ್ದವು. ಹೀಗಾಗಿ, ಅವುಗಳನ್ನು ಈಡೇರಿವುದು ಸರ್ಕಾರಕ್ಕೆ ಅಸಾಧ್ಯ ಎಂಬಂತಾಗಿತ್ತು. ಕರ್ನಾಟಕದಲ್ಲಿ ತಮಿಳನ್ನಯ ಎರಡನೇ ಆಡಳಿತ ಭಾಷೆಯನ್ನಾಗಿ ಘೋಷಿಸಬೇಕೆಂಬ ಬೇಡಿಕೆಯೂ ಇತ್ತು. ಇದು ಅನೇಕರಿಗಗೆ ಶಾಕಿಂಗ್ ಎನಿಸಿತ್ತು.

Leave a Reply

Your email address will not be published. Required fields are marked *

error: Content is protected !!