ಉದಯವಾಹಿನಿ, ಬೆಂಗಳೂರು: ಗ್ಯಾರಂಟಿ ಹಣವನ್ನೇ ಬಿಡುಗಡೆ ಮಾಡದೇ ತಲಾದಾಯದಲ್ಲಿ ರಾಜ್ಯವೇ ಪ್ರಥಮ ಎಂದು ಹೇಳಲು ಕಾಂಗ್ರೆಸ್‌‍ ನಾಯಕರುಗಳಿಗೆ ನಾಚಿಕೆಯಾಗುವುದಿಲ್ಲವೇ ಎಂದು ಆಮ್‌ ಆದಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಸೀತಾರಾಮ್‌ ಗುಂಡಪ್ಪ ಪ್ರಶ್ನೆ ಮಾಡಿದ್ದಾರೆ. ಪತ್ರಿಕಾ ಹೇಳಿಕೆಯಲ್ಲಿ, ಕಳೆದ ಫೆಬ್ರವರಿ ತಿಂಗಳಿನಿಂದ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಲಕ್ಷಾಂತರ ಮಹಿಳೆಯರಿಗೆ ಗೃಹಲಕ್ಷಿಯ ಹಣವನ್ನೇ ಬಿಡುಗಡೆ ಮಾಡಿಲ್ಲ. ಎಲ್ಲ ಜಿಲ್ಲೆಗಳಲ್ಲಿಯೂ ಮಹಿಳೆಯರು ಸಾಕಷ್ಟು ಆಕೋಶಭರಿತರಾಗಿದ್ದಾರೆ. ಗ್ಯಾರೆಂಟಿ ಹಣವನ್ನು ರಾಜ್ಯ ಕಾಂಗ್ರೆಸ್‌‍ ಸರ್ಕಾರ ಕೇವಲ ಚುನಾವಣೆಗಳಿಗಾಗಿ, ತಮ ನಕಲಿ ಸಾಧನ ಸಮಾವೇಶಗಳ ಸಮಯದಲ್ಲಿ ಮಹಿಳೆಯರ ಪ್ರಲೋಭನೆಗಾಗಿ ಮಾತ್ರ ಹಣವನ್ನು ಬಿಡುಗಡೆ ಮಾಡುತ್ತಿದ್ದಾರೆ. ಇನ್ನು ಮಿಕ್ಕೆಲ್ಲಾ ಗ್ಯಾರಂಟಿಗಳು ಸಂಪೂರ್ಣ ಹಳ್ಳ ಹಿಡಿದಿವೆ ಎಂದು ಹೇಳಿದ್ದಾರೆ.

ಆಹಾರ ಭದ್ರತಾ ಕಾಯ್ದೆಯ ಅಡಿಯಲ್ಲಿ ಕೇಂದ್ರ ಸರ್ಕಾರವು ಕಡ್ಡಾಯವಾಗಿ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೂ ತಲಾ 5 ಕೆ.ಜಿ. ಅಕ್ಕಿಯನ್ನು ಅನ್ನಭಾಗ್ಯ ಎಂಬ ಹೆಸರಿನಲ್ಲಿ ಕಾಂಗ್ರೆಸ್‌‍ ರಾಜ್ಯ ಸರ್ಕಾರವು ತನ್ನ ಕಾರ್ಯಕ್ರಮವೆಂದು ಬಿಂಬಿಸಿಕೊಳ್ಳುತ್ತಿರುವುದು ತೀರ ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದ್ದಾರೆ.

Leave a Reply

Your email address will not be published. Required fields are marked *

error: Content is protected !!