ಉದಯವಾಹಿನಿ, ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ವಿರುದ್ಧ ನೀಡಿದ ಅವಹೇಳನಕಾರಿ ಹೇಳಿಕೆಯ ಸಂಬಂಧ ಬಿಜೆಪಿ ಎಂಎಲ್‌ಸಿ ಎನ್. ರವಿಕುಮಾರ್ ಅವರಿಗೆ ಹೈಕೋರ್ಟ್‌ನಿಂದ ದೊಡ್ಡ ರಿಲೀಫ್ ಸಿಕ್ಕಿದೆ. ಅವರ ವಿರುದ್ಧದ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಈ ಹಿಂದೆ ಇದೇ ಪ್ರಕರಣದಲ್ಲಿ ಎನ್.ರವಿಕುಮಾರ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್ ಪೊಲೀಸರಿಗೆ ಆದೇಶಿಸಿತ್ತು.

ಮುಖ್ಯ ಕಾರ್ಯದರ್ಶಿ ತಮ್ಮ ಕುರಿತ ಹೇಳಿಕೆಯ ಬಗ್ಗೆ ದೂರು ನೀಡಿಲ್ಲ. ಮೂರನೇ ವ್ಯಕ್ತಿಯ ದೂರು ಆಧರಿಸಿ ಕೇಸ್ ದಾಖಲಾಗಿದೆ. ಹೇಳಿಕೆಯಲ್ಲಿ ಅಪರಾಧದ ಅಂಶಗಳಿಲ್ಲವೆಂದು ಎಂಎಲ್ ಸಿ ರವಿಕುಮಾರ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದಾರೆ. ವಾದ ವಿವಾದ ಆಲಿಸಿದ ಹೈಕೋರ್ಟ್‌ನ ನ್ಯಾ.ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಪೀಠ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ. ತಮ್ಮ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಪ್ರಶ್ನಿಸಿ ಎಂಎಲ್‌ಸಿ ಎನ್ ರವಿಕುಮಾರ್ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠವು ಎನ್.ರವಿಕುಮಾರ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಆದೇಶಿಸಿತ್ತು. ಇನ್ನು ಈ ಪ್ರಕರಣದಲ್ಲಿ ರವಿಕುಮಾರ್ ಅವರಿಗೆ ಹೈಕೋರ್ಟ್ ನ್ಯಾಯಪೀಠ ಜಾಮೀನು ಮಂಜೂರು ಮಾಡುವ ಮೂಲಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿತ್ತು.

Leave a Reply

Your email address will not be published. Required fields are marked *

error: Content is protected !!