ಉದಯವಾಹಿನಿ, ಅಸ್ಸಾಂನ ಗುವಾಹಟಿಯಲ್ಲಿರುವ ಪ್ರಸಿದ್ಧ ಕಾಮಾಕ್ಯ ದೇವಿ ದೇವಸ್ಥಾನಕ್ಕೆ ನಟ ದರ್ಶನ್ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದಾರೆ.ರಾಜ್ಯದಲ್ಲಿ ಡಿ-ಫ್ಯಾನ್ಸ್, ರಮ್ಯಾ ಮತ್ತು ಒಳ್ಳೆ ಹುಡ್ಗ ಪ್ರಥಮ್ ವಿಷಯಗಳ ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲೇ ನಟ ದರ್ಶನ್ ಕಾಮಾಕ್ಯ ದೇವಿ ಮೊರೆ ಹೋಗಿದ್ದಾರೆ.ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜೈಲು ಸೇರಿದ್ದ ನಟ ದರ್ಶನ್ ಬಿಡುಗಡೆಗಾಗಿ ಪತ್ನಿ ವಿಜಯಲಕ್ಷಿö್ಮ ಇದೇ ಕಾಮಾಕ್ಯ ದೇವಿ ದೇವಸ್ಥಾನಕ್ಕೆ ತೆರಳಿ ಹರಕೆ ಹೊತ್ತಿದ್ದರು. ಜೊತೆಗೆ ಕೆಲವೇ ದಿನಗಳಲ್ಲಿ ಸುಪ್ರೀಂ ತೀರ್ಪು ಬರುವ ಸಾಧ್ಯತೆಯಿದ್ದು, ದರ್ಶನ್ ಆತಂಕದಲ್ಲಿದ್ದಾರೆ. ಹೀಗಾಗಿ ಹರಕೆ ತೀರಿಸಲು ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ತೆರಳಿದ್ದಾರೆ.

ಕಳೆದ ವಾರ ಸುಪ್ರೀಂ ಕೋರ್ಟ್ನಲ್ಲಿ, ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ವಾದ-ಪ್ರತಿವಾದಗಳು ನಡೆದಿದ್ದು, ಒಂದು ವಾರದಲ್ಲಿ ತೀರ್ಪು ನೀಡುವುದಾಗಿ ಕೋರ್ಟ್ ತಿಳಿಸಿತ್ತು. ಇನ್ನೂ ನಟಿ ರಮ್ಯಾ ದರ್ಶನ್ ಅಭಿಮಾನಿಗಳ ವಿರುದ್ಧ ಕಾನೂನು ಸಮರಕ್ಕಿಳಿದಿದ್ದು, ಒಳ್ಳೆ ಹುಡ್ಗ ಪ್ರಥಮ್ ಧರಣಿ ಕೂರುವುದಾಗಿ ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!