ಉದಯವಾಹಿನಿ, ನಿರ್ದೇಶಕರು ಸಿನಿಮಾ ನಿರ್ಮಾಣ ಮಾಡುವ ಮೂಲಕ ಹೊಸ ಪ್ರತಿಭೆಗಳಿಗೆ ಅವಕಾಶ ಕೊಡುತ್ತಿದ್ದಾರೆ. ಅಂತೆಯೇ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ `ಏಳುಮಲೆ’ ಚಿತ್ರಕ್ಕೆ ಪುನೀತ್ ರಂಗಸ್ವಾಮಿ ಆಕ್ಷನ್ ಕಟ್ ಹೇಳುತ್ತಿದ್ದು, ಈ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ.ಏಳುಮಲೆ ಚಿತ್ರದ ಯಾವಾಗ ಎಂಬ ಮೆಲೋಡಿ ಹಾಡು ಆನಂದ್ ಆಡಿಯೋ ಯೂಟ್ಯೂಬ್ನಲ್ಲಿ ಬಿಡುಗಡೆಯಾಗಿದೆ. ಕನ್ನಡದ ಜೊತೆಗೆ ತೆಲುಗು, ತಮಿಳಿನಲ್ಲಿಯೂ ಗೀತೆಯನ್ನು ಅನಾವರಣ ಮಾಡಲಾಗಿದೆ. ನಾಗಾರ್ಜುನ್ ಶರ್ಮಾ ಸಾಹಿತ್ಯ ಬರೆದಿರುವ ಹಾಡಿಗೆ ಸಿದ್ ಶ್ರೀರಾಮ್ ಧ್ವನಿಯಾಗಿದ್ದಾರೆ. ಡಿ ಇಮ್ಮನ್ ಸಂಗೀತ ಒದಗಿಸಿದ್ದಾರೆ.
ಕರ್ನಾಟಕ-ತಮಿಳುನಾಡು ನಡುವಿನ ಗಡಿಭಾಗದ ಪ್ರೇಮಕಥೆಯಾಗಿರುವ `ಏಳುಮಲೆ’ ಸಿನಿಮಾದಲ್ಲಿ ನಟಿ ರಕ್ಷಿತಾ ಸೋದರ ರಾಣಾ ಕನ್ನಡದ ಹುಡ್ಗ ಹರೀಶ್ ಆಗಿ ನಟಿಸುತ್ತಿದ್ದಾರೆ. ರಿಯಾಲಿಟಿ ಶೋ ಮೂಲಕ ಮನೆ ಮಾತಾಗಿರುವ ಮೈಸೂರಿನ ಹುಡುಗಿ ಪ್ರಿಯಾ ಆಚಾರ್ ತಮಿಳು ಹುಡುಗಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ರಾಣಾ, ಪ್ರಿಯಾಂಕಾ ಆಚಾರ್ ಜೊತೆಗೆ ಜಗಪತಿ ಬಾಬು, ನಾಗಾಭರಣ, ಕಿಶೋರ್ ಕುಮಾರ್, ಸರ್ದಾರ್ ಸತ್ಯ, ಜಗಪ್ಪ ಇದ್ದಾರೆ.
