ಉದಯವಾಹಿನಿ, ಡೆಹ್ರಾಡೂನ್: ಕೇದಾರನಾಥ ಮಾರ್ಗದಲ್ಲಿ ಭಾರೀ ಮಳೆಯಿಂದಾಗಿ ಉಂಟಾದ ಭೂಕುಸಿತದಲ್ಲಿ ಸಿಲುಕಿಕೊಂಡಿದ್ದ ಸುಮಾರು 800 ಯಾತ್ರಿಕರನ್ನು ಎನ್ಡಿಆರ್ಎಫ್, ಎಸ್ಡಿಆರ್ಎಫ್ ಮತ್ತು ಪೊಲೀಸ್ ತಂಡಗಳು ರಕ್ಷಿಸಿವೆ.ಕೇದಾರನಾಥ ಯಾತ್ರಾ ಮಾರ್ಗದಲ್ಲಿ ಭಾರೀ ಮಳೆಯಿಂದಾಗಿ (Heavy Rain) ರುದ್ರಪ್ರಯಾಗ-ಕೇದಾರನಾಥ ಸಂಪರ್ಕಿಸುವ 107ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದೆ. ಪರಿಣಾಮ ಗೌರಿಕುಂಡ್ನಿಂದ ಸೋನ್ಪ್ರಯಾಗ್ಗೆ ಸಂಪರ್ಕಿಸುವ ಪ್ರಮುಖ ರಸ್ತೆಯ 50 ಮೀ. ಭಾಗವು ಸಂಪೂರ್ಣವಾಗಿ ಕೊಚ್ಚಿಕೊಂಡು ಹೋಗಿದೆ.
ರುದ್ರಪ್ರಯಾಗ ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ಎನ್.ಕೆ.ರಾಜ್ವಾರ್ ಅವರ ಮಾಹಿತಿ ಪ್ರಕಾರ, ಗೌರಿಕುಂಡ್ನಿಂದ ಸುಮಾರು 1.5 ಕಿಮೀ ದೂರದಲ್ಲಿರುವ ಮುಂಕಟಿಯಾ ಸ್ಲೈಡಿಂಗ್ ಝೋನ್ ಬಳಿ ಭೂಕುಸಿತ ಸಂಭವಿಸಿದೆ. ಈ ವೇಳೆ ಸಾವಿರಾರು ಯಾತ್ರಿಕರು ಸಿಲುಕಿಕೊಂಡಿದ್ದರು. ಕೂಡಲೇ ಎನ್ಡಿಆರ್ಎಫ್ ಹಾಗೂ ಎಸ್ಡಿಆರ್ಎಫ್ ತಂಡದ ಸಿಬ್ಬಂದಿ ಕಾರ್ಯಪ್ರವೃತ್ತರಾಗಿ, ಯಾತ್ರಿಕರನ್ನು ಸುರಕ್ಷಿತವಾಗಿ ಸೋನ್ಪ್ರಯಾಗ್ಗೆ ಸ್ಥಳಾಂತರಿಸಿದರು. ಭೂಕುಸಿತದಿಂದಾಗಿ ಕೇದಾರನಾಥ ಯಾತ್ರೆಯು ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ರಸ್ತೆಯನ್ನು ಸರಿಪಡಿಸಲು ಕನಿಷ್ಠ 2-3 ದಿನಗಳು ಬೇಕಾಗಬಹುದು ಎಂದು ತಿಳಿಸಿದ್ದಾರೆ.
