ಉದಯವಾಹಿನಿ, ಬೆಂಗಳೂರು: ಟ್ಯೂಷನ್ಗೆ ಹೋಗ್ತಿದ್ದ ಬಾಲಕನನ್ನು ದುಷ್ಕರ್ಮಿಗಳು ಅಪಹರಿಸಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣ ಸಂಬಂಧ ಬನ್ನೇರುಘಟ್ಟ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.ಗುರುಮೂರ್ತಿ ಹಾಗೂ ಗೋಪಾಲಕೃಷ್ಣ ಬಂಧಿತ ಆರೋಪಿಗಳು. ಬುಧವಾರ ರಾತ್ರಿ ಅರಕೆರೆ ಶಾಂತಿನಿಕೇತನ ಬಡಾವಣೆ ಬಳಿ ಟ್ಯೂಷನ್ನಿಂದ ಬರುತ್ತಿದ್ದ 13 ವರ್ಷದ ನಿಶ್ಚಿತ್ನನ್ನು ದುಷ್ಕರ್ಮಿಗಳು ಅಪಹರಿಸಿದ್ದರು.
ಬಾಲಕನ ತಂದೆ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿದ್ದರು. ಹೀಗಾಗಿ ಕಿಡ್ನ್ಯಾಪರ್ಸ್ ಕರೆ ಮಾಡಿ 5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಕಿಡ್ನ್ಯಾಪರ್ಸ್ ಕಡೆಯಿಂದ ಫೋನ್ ಬರ್ತಿದ್ದಂತೆ ಬಾಲಕ ಪೋಷಕರು ಹುಳಿಮಾವು ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಿಡ್ನ್ಯಾಪರ್ಸ್ಗಳ ಲೊಕೇಶನ್ ಟ್ರೇಸ್ ಮಾಡಿ ಹುಡುಕಾಟ ನಡೆಸಿದ್ದರು. ಮತ್ತೊಂದೆಡೆ ಪೋಷಕರು 5 ಲಕ್ಷ ಹಣವನ್ನು ಕೈಯಲ್ಲಿಡಿದು ಕಾದು ಕುಳಿತ್ತಿದ್ದರು. ಆದರೆ ಗುರುವಾರ ಸಂಜೆ 5 ಗಂಟೆ ಸುಮಾರಿಗೆ ಕಗ್ಗಲೀಪುರ ರಸ್ತೆಯ ನಿರ್ಜನ ಪ್ರದೇಶದಲ್ಲಿ ಬಾಲಕನ ಮೃತದೇಹ ಸುಟ್ಟ ರೀತಿಯಲ್ಲಿ ಪತ್ತೆಯಾಗಿತ್ತು. ಘಟನಾ ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಡಿಸಿಪಿ ನಾರಾಯಣ್ ಹಾಗೂ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ ಬಾಬಾ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದರು.
