ಉದಯವಾಹಿನಿ, ಲಕ್ನೋ: ಸ್ವ-ಕ್ಷೇತ್ರ ವಾರಣಾಸಿಗೆ ಇಂದು ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮೂಲಸೌಕರ್ಯ, ಶಿಕ್ಷಣ, ಆರೋಗ್ಯ ರಕ್ಷಣೆ, ಪ್ರವಾಸೋದ್ಯಮ, ನಗರಾಭಿವೃದ್ಧಿ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಿಗೆ ಸಂಬಂಧಿಸಿದ ಯೋಜನೆಗಳನ್ನು ಉದ್ಘಾಟಿಸಿದರು.
ಸುಮಾರು 2,200 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ನೆರವೇರಿಸಿದ್ರು. ಇದೇ ವೇಳೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 20ನೇ ಕಂತಿನ ಹಣವನ್ನ ಜಮೆ ಮಾಡಿದರು. 9.7 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ 20,000 ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತದ ಪಿಎಂ ಕಿಸಾನ್ ಸಮ್ಮಾನ್ ನಿಧಿಯ 20ನೇ ಕಂತಿನ ಹಣವನ್ನ ಜಮೆ ಮಾಡಿದರು.
ಇದೇ ವೇಳೆ ವೇದಿಕೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಆಪರೇಷನ್‌ ಸಿಂಧೂರ ಯಶಸ್ಸಿನ ಕುರಿತು ವಿವರಣೆ ನೀಡಿದ್ರು. ಆಪರೇಷನ್‌ ಸಿಂಧೂರ ಯಶಸ್ಸನ್ನ ನಾನು‌ ಮಹಾದೇವನಿಗೆ ಅರ್ಪಿಸುತ್ತೇನೆ ಎಂದರು.
ನಮ್ಮ ಹೆಣ್ಣುಮಕ್ಕಳ ಸಿಂಧೂರಕ್ಕೆ ಸೇಡು ತೀರಿಸಿಕೊಳ್ಳಲು ನಾವು ತೆಗೆದುಕೊಂಡ ಪ್ರತಿಜ್ಞೆ ಈಡೇರಿದೆ. ಮಹಾದೇವನ ಆಶೀರ್ವಾದದಿಂದ ಮಾತ್ರ ಅದು ಸಾಧ್ಯವಾಗಿದೆ. ಹಾಗಾಗಿ ʻಆಪರೇಷನ್ ಸಿಂಧೂರʼದ ಯಶಸ್ಸನ್ನ ಮಹಾದೇವನ ಪಾದಗಳಿಗೆ ಅರ್ಪಿಸುತ್ತೇನೆ ಎಂದು ನುಡಿದರು.

Leave a Reply

Your email address will not be published. Required fields are marked *

error: Content is protected !!