ಉದಯವಾಹಿನಿ, ಬೆಂಗಳೂರು: ಒಳಮೀಸಲಾತಿ ಕೊಡುವ ಸಂಬಂಧ ನ್ಯಾ. ನಾಗಮೋಹನ್ ದಾಸ್ ಆಯೋಗ ಇವತ್ತು ವರದಿ ಕೊಡ್ತಿದ್ದು, ಮಾದಿಗರಿಗೆ ನ್ಯಾಯ ಸಿಗೋ ವಿಶ್ವಾಸ ಇದೆ. ಮಾದಿಗರಿಗೆ 7% ಆದರೂ ಒಳಮೀಸಲಾತಿ ಕೊಡಬೇಕು ಎಂದು ಮಾಜಿ ಸಚಿವ ಆಂಜನೇಯ ಒತ್ತಾಯ ಮಾಡಿದ್ದಾರೆ.ವಿಧಾನಸೌಧದಲ್ಲಿ ಮಾತನಾಡಿದ ಅವರು, ಒಳಮೀಸಲಾತಿ ವರದಿ ಕೊಡುತ್ತಿರುವುದರಿಂದ ಆತಂಕ, ಕುತೂಹಲ, ಸಂತೋಷ ಎಲ್ಲಾ ಆಗುತ್ತಿದೆ. ಒಳಮೀಸಲಾತಿ ಬೇಕು ಅಂತ 35 ವರ್ಷಗಳ ಹೋರಾಟ ಮಾಡುತ್ತಿದ್ದೇವೆ. ಮಾದಿಗರಿಗೆ ಸರಿಯಾದ ಸವಲತ್ತು ಇದೂವರೆಗೂ ಸಿಕ್ಕಿಲ್ಲ. ಸುಪ್ರೀಂ ಕೋರ್ಟ್ ಒಳಮೀಸಲಾತಿ ಕೊಡಿ ಅಂತ ಆದೇಶ ಬಂದ ಮೇಲೆ ನಮಗೆ ಧೈರ್ಯ ಬಂತು. ಈವರೆಗೂ ನಮಗೆ ಸಿಗೋ ಸವಲತ್ತು ಸಿಕ್ಕಿಲ್ಲ. ಮಾದಿಗರು ಅವಕಾಶದಿಂದ ವಂಚನೆ ಆಗುತ್ತಿದ್ದಾರೆ. ಒಳಮೀಸಲಾತಿಯ ವರದಿ ಕೊಡುತ್ತಿದ್ದಾರೆ. ಒಳಮೀಸಲಾತಿ ವರದಿ ಕೊಡ್ತಿರೋದ್ರಿಂದ ಮಾದಿಗರು ಬದುಕಬಹುದು ಎಂಬ ನಂಬಿಕೆ ಬಂದಿದೆ ಎಂದರು.
ನಾವು ಅಸ್ಪೃಶ್ಯರು ಅಂತ ಸರಿಯಾಗಿ ಸರ್ಕಾರದ ಸವಲತ್ತು ಸಿಕ್ಕಿರಲಿಲ್ಲ. ಸಿದ್ದರಾಮಯ್ಯ ಸಾಮಾಜಿಕ ನ್ಯಾಯದ ಹರಿಕಾರ ಒಳಮೀಸಲಾತಿ ಜಾತಿಗೆ ಆಯೋಗ ರಚನೆ ಮಾಡಿದ್ರು. ಆಯೋಗ ರಾಜ್ಯಾದ್ಯಂತ ಸಮೀಕ್ಷೆ ಮಾಡಿದೆ.

Leave a Reply

Your email address will not be published. Required fields are marked *

error: Content is protected !!