ಉದಯವಾಹಿನಿ, ನಟ ದರ್ಶನ್ ಬುಧವಾರ ಸಂಜೆ ದಿಢೀರ್ ಮೈಸೂರಿಗೆ ಆಗಮಿಸಿ ಚಾಮುಂಡಿ ದೇವಿ ದರ್ಶನ ಪಡೆದಿದ್ದಾರೆ. ಈ ಹಿಂದೆ ಆಷಾಢ ಶುಕ್ರವಾರಕ್ಕೆ ಕುಟುಂಬದ ಜೊತೆ ಆಗಮಿಸಿದ್ದ ದರ್ಶನ್ ಇದೀಗ ಏಕಾಂಗಿಯಾಗಿ ಆಗಮಿಸಿ ತಾಯಿ ಚಾಮುಂಡಿ ಪಾದಕ್ಕೆರಗಿದ್ದಾರೆ.ದರ್ಶನ್ ಈ ಭೇಟಿ ಹಲವು ಕಥೆಗಳನ್ನ ಹುಟ್ಟುಹಾಕಿದೆ. ವಾರದ ಹಿಂದೆ ದರ್ಶನ್ ಅಸ್ಸಾಂನ ಗುವಾಹಟಿಯ ಕಾಮಾಕ್ಯದೇವಿ ದರ್ಶನ ಮಾಡಿ ಬಂದಿದ್ದರು. ಇದೀಗ ಮತ್ತೋರ್ವ ಶಕ್ತಿ ಸ್ವರೂಪಿಣಿಯ ಸ್ಮರಣೆ ಮಾಡಿದ್ದಾರೆ.
ಸಾಮಾನ್ಯವಾಗಿ ದರ್ಶನ್ ಆಷಾಢ ಮಾಸದ ಶುಕ್ರವಾರ ಹಾಗೂ ಮೈಸೂರಿನಲ್ಲಿ ಚಿತ್ರೀಕರಣ ಹೊರತಾಗಿ ಚಾಮುಂಡಿ ಬೆಟ್ಟಕ್ಕೆ ಭೇಟಿ ಕೊಡೋದಿಲ್ಲ. ಆದರೀಗ ಶ್ರಾವಣ ಮಾಸದ ಬುಧವಾರ ದಿಢೀರ್ ಚಾಮುಂಡಮ್ಮನ ಆಶೀರ್ವಾದ ಬೇಡಿರುವುದು ವಿಶೇಷ. ಸದ್ಯದಲ್ಲೇ ದರ್ಶನ್‌ಗೆ ನೀಡಿರುವ ಜಾಮೀನಿನ ರದ್ದು ಕೋರಿ ಸಲ್ಲಿಸಲಾದ ಅರ್ಜಿಯ ಆದೇಶ ಹೊರಬೀಳುತ್ತೆ. ಇದೇ ಆತಂಕದಲ್ಲೇ ಇರುವ ದರ್ಶನ್ ನೆಮ್ಮದಿಗಾಗಿ ದೇವಾನ್ ದೇವತೆಗಳ ಮೊರೆ ಹೋಗುತ್ತಿದ್ದಾರೆ ಅನ್ನೋ ಮಾತು ಕೇಳಿಬರುತ್ತಿದೆ.

Leave a Reply

Your email address will not be published. Required fields are marked *

error: Content is protected !!