ಉದಯವಾಹಿನಿ, ಬೆಂಗಳೂರು: ಧರ್ಮಸ್ಥಳದಲ್ಲಿ ಆಗುತ್ತಿರುವ ಗಲಾಟೆ ವಿಚಾರದಲ್ಲಿ ಜನರು ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಕರೆ ನೀಡಿದ್ದಾರೆ.ಧರ್ಮಸ್ಥಳದಲ್ಲಿ ಆಗುತ್ತಿರುವ ಗಲಾಟೆ ವಿಚಾರವಾಗಿ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಯಾರು ಕಾನೂನು ಕೈಗೆತ್ತಿಕೊಳ್ಳಬಾರದು. ಸರಿಯಾದ ಸುದ್ದಿ, ಸುಳ್ಳು ಸುದ್ದಿ ಎಂದು ಜನರೇ ಹಿಂಸಾಚಾರ ಮಾಡೋದು ಸರಿಯಲ್ಲ. ಧರ್ಮಸ್ಥಳ ಕೇಸ್‌ನಲ್ಲಿ ಈಗಾಗಲೇ ಎಸ್‌ಐಟಿ (SIT) ತನಿಖೆ ಆಗುತ್ತಿದೆ. ಮೊದಲು ತನಿಖೆ ಆಗಲಿ. ಕೋರ್ಟ್ನಲ್ಲೂ ಈ ಬಗ್ಗೆ ಕೇಸ್ ಇದೆ. ತನಿಖೆ ನಡೆಯುವಾಗ ಯಾರೂ ಹೀಗೆ ಮಾಡಬಾರದು ಎಂದು ತಿಳಿಸಿದ್ದಾರೆ.
ಫೇಕ್ ನ್ಯೂಸ್ (Fake News) ತಡೆಗೆ ಸರ್ಕಾರದಿಂದ ಬಿಲ್ ತರುತ್ತಿದ್ದೇವೆ. ಅದು ಬಂದ ಮೇಲೆ ಇವೆಲ್ಲಾ ಕಡಿಮೆ ಆಗುತ್ತದೆ. ಹೀಗಾಗಿ ಏನೇನೋ ಅರ್ಥೈಸಿಕೊಂಡು ಜನರು ಯಾರು ಕಾನೂನು ಕೈಗೆ ತೆಗೆದುಕೊಳ್ಳಬಾರದು ಎಂದು ಹೇಳಿದ್ದಾರೆ

Leave a Reply

Your email address will not be published. Required fields are marked *

error: Content is protected !!