ಉದಯವಾಹಿನಿ, ರಾಂಚಿ: ಜಾರ್ಖಂಡ್‌ನ ಸೆರೈಕೆಲಾ-ಖಾರ್ಸ್ವಾನ್ ಜಿಲ್ಲೆಯ ಚಂಡೀಲ್ ನಿಲ್ದಾಣದ ಬಳಿ ಶನಿವಾರ ಮುಂಜಾನೆ ಎರಡು ಗೂಡ್ಸ್ ರೈಲುಗಳ ಬೋಗಿಗಳು ಹಳಿತಪ್ಪಿದ ಪರಿಣಾಮ ಆಗ್ನೇಯ ರೈಲ್ವೆಯ ಚಾಂಡಿಲ್-ಟಾಟಾನಗರ ವಿಭಾಗದ ನಡುವಿನ ರೈಲು ಸೇವೆಗಳಲ್ಲಿ ವ್ಯತ್ಯಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರೈಲ್ವೆ ನಿಲ್ದಾಣದಿಂದ 200 ಮೀ ದೂರದಲ್ಲಿ ಗೂಡ್ಸ್ ರೈಲುಗಳ ಹಳಿ ತಪ್ಪಿದೆ. ಆದರೆ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಚಂಡೀಲ್ (Chandil) ರೈಲ್ವೆ ನಿಲ್ದಾಣಕ್ಕೆ ಬರುವ ಹಾಗೂ ನಿರ್ಗಮಿಸುವ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ ಎಂದು ಹಿರಿಯ ವಿಭಾಗೀಯ ವಾಣಿಜ್ಯ ಮ್ಯಾನೇಜರ್ ವಿಕಾಸ್ ಕುಮಾರ್ ತಿಳಿಸಿದ್ದಾರೆ.
ಅಲ್ಪಾವಧಿಗೆ ರೈಲು ಸಂಚಾರ ಸ್ಥಗಿತಗೊಳಿಸಲಾಗಿದ್ದು, ಚಾಂಡಿಲ್-ಟಾಟಾನಗರ, ಚಾಂಡಿಲ್-ಮುರಿ ಮತ್ತು ಚಾಂಡಿಲ್-ಪುರುಲಿಯಾ-ಬೊಕಾರೊ ಮಾರ್ಗಗಳ ರೈಲು ಸೇವೆಗಳಲ್ಲಿ ವ್ಯತ್ಯಯವಾಗಲಿದೆ. ವ್ಯಾಗನ್‌ಗಳ ತೆರವು ಕಾರ್ಯ ಹಾಗೂ ಹಳಿಗಳ ದುರಸ್ಥಿ ಮಾಡಲಾಗುತ್ತಿದ್ದು, ಆದಷ್ಟು ಬೇಗ ರೈಲು ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದಿದ್ದಾರೆ.

Leave a Reply

Your email address will not be published. Required fields are marked *

error: Content is protected !!