ಉದಯವಾಹಿನಿ, ಬೆಂಗಳೂರು: ಸಹಕಾರ ಸಚಿವ ಕೆಎನ್‌ ರಾಜಣ್ಣ ರಾಜೀನಾಮೆ ಬಗ್ಗೆ ಕೇಳಿದ್ದಕ್ಕೆ ಡಿಕೆ ಶಿವಕುಮಾರ್‌ ಎರಡು ಕೈ ಮುಗಿದು ಒಳ ನಡೆದಿದ್ದಾರೆ. ರಾಜಣ್ಣ ರಾಜೀನಾಮೆ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್‌ ಅವರನ್ನು ವಿಧಾನಸೌಧದಲ್ಲಿ ಮಾಧ್ಯಮಗಳು ಪ್ರಶ್ನಿಸಿದವು. ಈ ವೇಳೆ ಡಿಸಿಎಂ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಮತ್ತಷ್ಟು ಪ್ರಶ್ನೆ ಕೇಳಿದಾಗ ಡಿಕೆಶಿ ಎರಡು ಕೈ ಮುಗಿದು ಸಿಎಂ ಸಿದ್ದರಾಮಯ್ಯ ಅವರ ಕೊಠಡಿಗೆ ತೆರಳಿದರು. ರಾಜಣ್ಣ ಅವರ ಪುತ್ರ, ಪರಿಷತ್‌ ಸದಸ್ಯ ರಾಜೇಂದ್ರ ಅವರು ತಂದೆಯ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲಿಸಿದ್ದಾರೆ.ರಾಜಣ್ಣ ಅವರು ಮೊದಲಿನಿಂದಲೂ ಸಿಎಂ ಪರವಾಗಿಯೇ ಬ್ಯಾಟ್‌ ಬೀಸುತ್ತಿದ್ದರು. ಹೀಗಾಗಿ ಆಪ್ತನ ರಾಜೀನಾಮೆಯನ್ನು ಸಿಎಂ ಪಡೆದುಕೊಳ್ಳುತ್ತಾರಾ ಇಲ್ವೋ ಎಂಬ ಪ್ರಶ್ನೆ ಎದ್ದಿತ್ತು. ಆದರೆ ಹೈಕಮಾಂಡ್‌ನಿಂದ ಸ್ಪಷ್ಟವಾದ ಸಂದೇಶ ಬಂದ ಹಿನ್ನೆಲೆಯಲ್ಲಿ ರಾಜೀನಾಮೆಯನ್ನು ಅಂಗೀಕಾರಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!