ಉದಯವಾಹಿನಿ, ಡೆಹ್ರಾಡೂನ್: ಉತ್ತರಕಾಶಿಯಿಂದ ಗಂಗ್ನಾನಿಗೆ ತೆರಳುವ ಮಾರ್ಗದಲ್ಲಿ ಭಾರಿ ಭೂಕುಸಿತ ಸಂಭವಿಸಿದ ಪರಿಣಾಮ ನೆತಾಲ ಬಳಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.ಸೋಮವಾರ ಬೆಳಗ್ಗೆ ಭೂಕುಸಿತ ಸಂಭವಿಸಿದ ಪರಿಣಾಮ ಮಣ್ಣು ರಸ್ತೆಗೆ ಬಿದ್ದು, ರಸ್ತೆ ಸಂಪೂರ್ಣ ದುಸ್ತರಗೊಂಡಿದೆ. ಈ ಹಿನ್ನೆಲೆ ಗಂಗ್ನಾನಿ ಪ್ರವೇಶ ಕಡಿತಗೊಂಡಿದೆ. ರಸ್ತೆಗೆ ಬಿದ್ದಿರುವ ಭಾರೀ ಪ್ರಮಾಣದ ಮಣ್ಣು ಹಾಗೂ ಅವಶೇಷಗಳನ್ನು ತೆಗೆದು ಸಂಚಾರವನ್ನು ಪುನಃಸ್ಥಾಪಿಸಲು ಜೆಸಿಬಿಗಳನ್ನು ನಿಯೋಜಿಸಲಾಗಿದೆ. ಆದಷ್ಟು ಬೇಗ ರಸ್ತೆಯನ್ನು ತೆರವುಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರಕಾಶಿ ಜಿಲ್ಲೆಯಾದ್ಯಂತ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಸಂಜೆ ಮತ್ತು ರಾತ್ರಿಯ ವೇಳೆಗೆ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಆರು ಗಂಟೆಗಳ ಒಳಗೆ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Leave a Reply

Your email address will not be published. Required fields are marked *

error: Content is protected !!