ಉದಯವಾಹಿನಿ, ಶ್ರೀನಗರ: ಜಮ್ಮು- ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿಯ ಚುರುಂಡಾ ಪ್ರದೇಶದಲ್ಲಿ ಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನವನ್ನು ಭಾರತೀಯ ಸೇನಾ ಪಡೆಗಳು ವಿಫಲಗೊಳಿಸಿವೆ. ಈ ವೇಳೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಒಬ್ಬ ಸೈನಿಕ ಹುತಾತ್ಮನಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಾಳಿಕೋರರನ್ನು ಪತ್ತೆಹಚ್ಚಲು ಪ್ರದೇಶದಲ್ಲಿ ಒಳನುಸುಳುವಿಕೆ ನಿಗ್ರಹ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಗುಂಡಿನ ಚಕಮಕಿ ನಡೆಯುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಆ.11 ರಂದು, ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯ ಬಳಿ ಅನುಮಾನಾಸ್ಪದ ಚಲನವಲನಗಳನ್ನು ಗಮನಿಸಿ ಬಿಎಸ್‌ಎಫ್ ಸಿಬ್ಬಂದಿ ಗುಂಡು ಹಾರಿಸಿದ ನಂತರ ಗಾಯಗೊಂಡ ಪಾಕಿಸ್ತಾನಿ ಒಳ ನುಸುಳುಕೋರರನ್ನು ಬಂಧಿಸಲಾಗಿತ್ತು. ಹಿರಾನಗರ ವಲಯದ ಚಂದ್ವಾನ್ ಮತ್ತು ಕೊಥೆ ಗಡಿ ಹೊರಠಾಣೆಗಳ ನಡುವೆ ಸಂಜೆ 4 ಗಂಟೆ ಸುಮಾರಿಗೆ ಜಾಗೃತ ಪಡೆಗಳು ಒಳನುಗ್ಗುವವರನ್ನು ಗಮನಿಸಿದರು. ಅವರನ್ನು ನಿಲ್ಲಿಸಲು ಸವಾಲು ಹಾಕಲಾಯಿತು. ನುಸುಳುಕೋರರು ಪದೇ ಪದೇ ಎಚ್ಚರಿಕೆ ನೀಡಿದ್ದರೂ ಕೇಳದ ಹಿನ್ನಲೆ ಮುಂಭಾಗದ ಪೋಸ್ಟ್‌ಗಳನ್ನು ನಿರ್ವಹಿಸುತ್ತಿದ್ದ ಬಿಎಸ್‌ಎಫ್ ಸಿಬ್ಬಂದಿ ಗುಂಡು ಹಾರಿಸಿದರು, ಇದರ ಪರಿಣಾಮವಾಗಿ ಒಳನುಗ್ಗುವವರಲ್ಲಿ ಒಬ್ಬರಿಗೆ ಗಾಯವಾಯಿತು.

Leave a Reply

Your email address will not be published. Required fields are marked *

error: Content is protected !!