ಉದಯವಾಹಿನಿ, ರಾಯಚೂರು: ಮಹಾದಾಸೋಹಿ ಶರಣಬಸಪ್ಪ ಅಪ್ಪ ಲಿಂಗೈಕ್ಯ ಹಿನ್ನೆಲೆ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ಸಂತಾಪ ಸೂಚಿಸಿದ್ದಾರೆ.ರಾಯಚೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಶರಣಬಸವೇಶ್ವರ ದೇವಸ್ಥಾನ ಅಂದ್ರೆ ಪೂಜ್ಯನೀಯ ಭಾವನೆ ಇದೆ. ಪೀಠಾಧಿಪತಿ ಶರಣಬಸಪ್ಪ ಅಪ್ಪ ಅವರು ಲಿಂಗೈಕ್ಯ ಆಗಿದ್ದರಿಂದ ದುಃಖ ತಂದಿದೆ. ಇಂದು ಅಂತಿಮ ವಿಧಿವಿಧಾನ ಜರುಗಲಿದ್ದು, ಸಂತಾಪ ಸೂಚಿಸುತ್ತಿದ್ದೇನೆ. ವಿಶೇಷವಾಗಿ ದೇವಸ್ಥಾನದ ಪ್ರಭಾವ ಈ ಭಾಗದಲ್ಲಿ ಬಹಳಷ್ಟು ಇದೆ ಎಂದಿದ್ದಾರೆ. ಅನ್ನದಾಸೋಹ, ಶಿಕ್ಷಣ ದಾಸೋಹ ಮುಖಾಂತರ ನಾಡಿನ ಜನರ ಮನಸ್ಸನ್ನ ಶರಣಬಸಪ್ಪ ಅಪ್ಪಾ ಗೆದ್ದಿದ್ದಾರೆ. ಇನ್ನೂ ಆಧ್ಯಾತ್ಮದ ಕಡೆಗೆ ಜನರನ್ನು ಸೆಳೆಯುವಲ್ಲೂ ಅವರ ಅಪಾರ ಕೊಡುಗೆಯಿದೆ ಎಂದು ಹೇಳಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!