ಉದಯವಾಹಿನಿ, ಕೋಲಾರ: 4ನೇ ಶ್ರಾವಣ ಶನಿವಾರ ಹಿನ್ನೆಲೆ ಕೋಲಾರ ಜಿಲ್ಲೆಯ ವೆಂಕಟೇಶ್ವರ ಸ್ವಾಮಿ ದೇವಾಲಯಗಳಲ್ಲಿ ಜನ ಸಾಗರವೇ ಹರಿದು ಬಂದಿತ್ತು.
ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕು ಬಂಗಾರ ತಿರುಪತಿ ದೇವಾಲಯ ಮಾಲೂರು ತಾಲೂಕು ಚಿಕ್ಕ ತಿರುಪತಿ ದೇವಾಲಯದಲ್ಲೂ ಜನರ ದಂಡು ಹೆಚ್ಚಾಗಿತ್ತು. ಇತಿಹಾಸ ಪ್ರಸಿದ್ಧ ಬಂಗಾರ ತಿರುಪತಿ ನೇತ್ರ ವೆಂಕಟರಮಣ ಸ್ವಾಮಿ ಹಾಗೂ ಚಿಕ್ಕ ತಿರುಪತಿಯ ಪ್ರಸನ್ನ ವೆಂಕರಮಣ ಸ್ವಾಮಿ ದರ್ಶನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಇಂದು ಮುಂಜಾನೆಯಿಂದ ಶ್ರದ್ಧಾ ಭಕ್ತಿಯಿಂದ ದೇವರಿಗೆ ವಿಶೇಷ ಪೂಜೆ ಪುನಸ್ಕಾರಗಳನ್ನ ಮಾಡಲಾಯಿತು.

ಶ್ರಾವಣ ಮಾಸದ ಪ್ರಯುಕ್ತ ಭಕ್ತರಿಂದ ವೆಂಕಟೇಶ್ವರ ಸ್ವಾಮಿಗೆ ವಿಶೇಷ ಪೂಜೆ, ವಿಶೇಷ ಹರಕೆ ತೀರಿಸಿದರು. ಶ್ರಾವಣ ಶನಿವಾರ ಹಿನ್ನೆಲೆ ದೇವಾಲಯದಿಂದ ಭಕ್ತರಿಗೆ ಪ್ರಸಾದ, ನೀರಿನ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನ ಮಾಡಲಾಗಿತ್ತು. ಇನ್ನೂ ಕೋಲಾರ ನಗರದ ಪೇಟೆ ವೆಂಕಟರಮಸ್ವಾಮಿ ದೇವಾಲಯಕ್ಕೂ ಭಕ್ತ ಸಾಗರ ಹರಿದು ಬಂದಿತ್ತು. ಬೆಳಗ್ಗೆಯಿಂದಲೇ ದೇವರ ದರ್ಶನ ಪಡೆಯಲು ಭಕ್ತ ಗಣ ಆಗಮಿಸಿತ್ತು.

Leave a Reply

Your email address will not be published. Required fields are marked *

error: Content is protected !!