ಉದಯವಾಹಿನಿ, ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು 7 ದಿನಗಳ ಒಳಗಡೆ ಸಾಕ್ಷ್ಯಾಧಾರಗಳೊಂದಿಗೆ ಅಫಿಡವಿಟ್ ಸಲ್ಲಿಸಬೇಕು ಅಥವಾ ಸಾರ್ವಜನಿಕ ಕ್ಷಮೆಯಾಚಿಸಬೇಕು ಎಂದು ಚುನಾವಣಾ ಆಯೋಗ ಹೇಳಿದೆ. ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ಈ ವಿಚಾರದಲ್ಲಿ ಮೂರನೇ ಆಯ್ಕೆ ಇಲ್ಲ. ನಿಗದಿತ ಸಮಯದೊಳಗೆ ಅಫಿಡವಿಟ್ ಸಲ್ಲಿಸದೇ ಇದ್ದರೆ ಆ ಆರೋಪಗಳನ್ನು ಆಧಾರರಹಿತವೆಂದು ಪರಿಗಣಿಸಲಾಗುತ್ತದೆ ಎಂದು ತಿಳಿಸಿದರು.
ರಾಹುಲ್ ಗಾಂಧಿಯವರ ಡಬಲ್ ವೋಟಿಂಗ್ ಮತ್ತು ಮತ ಕಳ್ಳತನ ಆರೋಪಗಳನ್ನು ತಿರಸ್ಕರಿಸಿದ ಅವರು, ಬಿಹಾರದ ಏಳು ಕೋಟಿಗೂ ಹೆಚ್ಚು ಮತದಾರರು ಚುನಾವಣಾ ಆಯೋಗದ ಜೊತೆ ನಿಂತಿರುವಾಗ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯ ಬಗ್ಗೆ ಅಥವಾ ಮತದಾರರ ವಿಶ್ವಾಸಾರ್ಹತೆಯ ಬಗ್ಗೆ ಯಾವುದೇ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೇಳಿದರು.
ಮಷಿನ್ ರೀಡೆಬೆಲ್ ಡೇಟಾ ನೀಡುವುದರಿಂದ ಮತದಾರರ ಗೌಪ್ಯತೆ ಬಹಿರಂಗವಾಗಬಹುದು ಎಂದು ಸುಪ್ರೀಂಕೋರ್ಟ್ ಹೇಳಿದೆ. ಸುಪ್ರೀಂಕೋರ್ಟ್ ಆದೇಶದ ಹಿನ್ನಲೆ ಅದನ್ನು ನೀಡಲು ಸಾಧ್ಯವಿಲ್ಲ. ವಿಶೇಷ ಪರಿಷ್ಕರಣೆ ಬಿಹಾರದಲ್ಲಿ ಮೊದಲ ಬಾರಿಗೆ ನಡೆಯುತ್ತಿಲ್ಲ. ಈ ಹಿಂದೆ 2003 ರಲ್ಲೇ ಪರಿಷ್ಕರಣೆ ಮಾಡಲಾಗಿತ್ತು. ಈಗ ಈ ಪರಿಷ್ಕರಣೆಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ಸುಮ್ಮನೇ ಆರೋಪ ಮಾಡಲಾಗುತ್ತಿದೆ ಎಂದರು.

Leave a Reply

Your email address will not be published. Required fields are marked *

error: Content is protected !!