ಉದಯವಾಹಿನಿ, ಉಡುಪಿ: ನೀನು ಉಜಿರೆಯಲ್ಲಿ ಇದ್ದದ್ದಕ್ಕೆ ಬಚಾವಾದೆ, ಉಡುಪಿಯಲ್ಲಿ ಇದ್ದಿದ್ರೆ ಮಲ್ಪೆ ಬೀಚಿನಲ್ಲಿ ಫುಟ್ಬಾಲ್ ಆಡಿಸುತ್ತಿದ್ದೆ ಎಂದು ಶಾಸಕ ಯಶ್‌ಪಾಲ್ ಸುವರ್ಣ ಯೂಟ್ಯೂಬರ್ ಸಮೀರ್‌ಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಮಾತನಾಡಿದ ಅವರು, ಯೂಟ್ಯೂಬರ್ ಸಮೀರ್‌ಗೆ ನೇರ ಎಚ್ಚರಿಕೆ ಕೊಡುತ್ತೇನೆ. ನೀನು ಉಜಿರೆಯಲ್ಲಿ ಇದ್ದದ್ದಕ್ಕೆ ಬಚಾವಾದೆ. ಉಡುಪಿಯಲ್ಲಿ ಇರುತ್ತಿದ್ದರೆ ಮಲ್ಪೆ ಬೀಚಿನಲ್ಲಿ ಫುಟ್ಬಾಲ್ ಆಡಿಸುತ್ತಿದ್ದೆ. ನಿನ್ನನ್ನು ನಾವು ಫುಟ್ಬಾಲ್ ಮಾಡಿ ಆಡಿಸುತ್ತಿದ್ದೆವು. ಅಧಿವೇಶನ ಮುಗಿದ ಮೇಲೆ ಬರುತ್ತೇನೆ. ಸಮೀರ್ ಬಗ್ಗೆ ಒಳ್ಳೆಯ ಪ್ಲ್ಯಾನ್‌ ಮಾಡಿ, ಆತನನ್ನು ರಾಜ್ಯದಿಂದ ಓಡಿಸುತ್ತೇವೆ. ಕಾಂಗ್ರೆಸ್ ಹೈಕಮಾಂಡ್‌ನ ಒತ್ತಡದಿಂದ ಆತ ಬಂಧನವಾಗಿಲ್ಲ. ನಮ್ಮ ಸರ್ಕಾರ ಇರಲಿ, ಇರದೇ ಇರಲಿ. ನಮ್ಮದು ಹಿಂದೂ ಸಮಾಜದ ಪರ ವಾದ. ನಮ್ಮದು ಹಿಂದುತ್ವದ ಫ್ಯಾಕ್ಟರಿ, ಹಿಂದು ಸಮಾಜವನ್ನು ಒಡೆಯಲು ಸಾಧ್ಯವಿಲ್ಲ ಎಂದು ಕಿಡಿಕಾರಿದರು.

ಅಣ್ಣಪ್ಪ ಪಂಜುರ್ಲಿ ದೈವದ ಅನುಗ್ರಹವಾಗಿದೆ. ದೇವರ ಮಧ್ಯಸ್ಥಿಕೆಯಲ್ಲಿ ಎಲ್ಲ ಇತ್ಯರ್ಥ ಆಗುತ್ತದೆ. ಬಿಜೆಪಿ ಹೋರಾಟ ಒಂದು ಭಾಗ ಮಾತ್ರ. ಅಣ್ಣಪ್ಪ ಪಂಜುರ್ಲಿ ಎಲ್ಲರ ಮನೆಯ ದೇವರು. ಮೊಗವೀರ ಸಮುದಾಯದ ಪ್ರಾರ್ಥನೆ ಫಲ ಕೊಟ್ಟಿದೆ. ಕೋಟ್ಯಂತರ ದೈವಭಕ್ತರ ಪ್ರಾರ್ಥನೆ ಫಲಿಸಿದೆ. ಪರಶುರಾಮನ ಸೃಷ್ಟಿಯಲ್ಲಿ ಧರ್ಮಕ್ಕೆ ಗೆಲುವಾಗಿದೆ. ಮಂಜುನಾಥ ಸ್ವಾಮಿ, ಅಣ್ಣಪ್ಪ ಸ್ವಾಮಿ ಕಣ್ಣು ಬಿಟ್ಟಿದ್ದಾರೆ. ಉಡುಪಿ ಕೃಷ್ಣ ಮುಖ್ಯಪ್ರಾಣ ಅನ್ಯಾಯಕ್ಕೆ ಶಿಕ್ಷೆ ಕೊಟ್ಟಿದ್ದಾರೆ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!