ಉದಯವಾಹಿನಿ, ದಕ್ಷಿಣ ಭಾರತ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಕೆವಿಎನ್ ಇದೀಗ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದೆ. ನಿರ್ಮಾಣ ಹಾಗೂ ವಿತರಣೆಯಲ್ಲಿ ದೊಡ್ಡ ಹೆಸರು ಮಾಡಿರುವ ಈ ಸಂಸ್ಥೆ ಈಗ ಟಾಲಿವುಡ್ ಮೆಗಾ ಸ್ಟಾರ್ ಚಿರಂಜೀವಿ ಅವರಿಗೆ ಸಿನಿಮಾ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದೆ. ಅಂದಹಾಗೆ ಬಹುನಿರೀಕ್ಷಿತ ಟಾಕ್ಸಿಕ್, ಕೆಡಿ ಸಿನಿಮಾ ನಿರ್ಮಿಸುತ್ತಿರುವ ಕೆವಿಎನ್ ಸಂಸ್ಥೆಯಿಂದ ಮತ್ತೊಂದು ಹೊಸ ಅಧ್ಯಾಯ ಶುರುವಾಗಲಿದೆ. ಕೆವಿಎನ್ ಸಂಸ್ಥೆ ತಮಿಳಿನಲ್ಲಿ ದಳಪತಿ ವಿಜಯ್ ನಟನೆಯ `ಜನ ನಾಯಗನ್’ ಚಿತ್ರ ನಿರ್ಮಾಣ ಮಾಡುವ ಮೂಲಕ ತಮಿಳು ಚಿತ್ರರಂಗಕ್ಕೂ ಎಂಟ್ರಿ ಕೊಟ್ಟಿದೆ. ಇದೀಗ ತೆಲುಗು ಚಿತ್ರರಂಗದತ್ತ ಮುಖ ಮಾಡಿರುವ ಕೆವಿಎನ್ ಸಂಸ್ಥೆ, ಚಿರಂಜೀವಿ ಅವರ 158ನೇ ಸಿನಿಮಾಗೆ ಬಂಡವಾಳ ಹೂಡಲು ಮುಂದಾಗಿದೆ. ಮೆಗಾಸ್ಟಾರ್ ಚಿರಂಜೀವಿ ಅವರ 70ನೇ ವರ್ಷದ ಹುಟ್ಟುಹಬ್ಬದ ವಿಶೇಷವಾಗಿ ಈ ಪ್ರಾಜೆಕ್ಟ್ ಅನೌನ್ಸ್ ಮಾಡಲಾಗಿದೆ. ಈ ಹಿಂದೆ `ವಾಲ್ತೇರು ವೀರಯ್ಯ’ ಸಿನಿಮಾ ಮಾಡಿದ್ದ ಬಾಬಿ ಕೊಲ್ಲಿ ಮತ್ತೊಮ್ಮೆ ಚಿರುಗೆ ಆ್ಯಕ್ಷನ್‍ಕಟ್ ಹೇಳುತ್ತಿದ್ದಾರೆ.

ಚಿರಂಜೀವಿ-ಬಾಬಿ-ಕೆವಿಎನ್ ಕಾಂಬಿನೇಷನ್ ಸಿನಿಮಾ ಪ್ಯಾನ್ ಇಂಡಿಯಾ ಲೆವೆಲ್‍ನಲ್ಲಿ ಮೂಡಿ ಬರಲಿದೆ. ಈ ಚಿತ್ರವನ್ನು ದಸರಾಗೆ ಲಾಂಚ್ ಮಾಡಲು ಚಿತ್ರತಂಡ ಭರ್ಜರಿ ಪ್ಯಾನ್ ಹಾಕಿಕೊಂಡಿದ್ದು, ವರ್ಷದ ಕೊನೆಗೆ ಶೂಟಿಂಗ್ ಆರಂಭ ಮಾಡಲು ಸಿದ್ಧತೆ ಮಾಡಿಕೊಂಡಿದೆಯಂತೆ. ಮೆಗಾಸ್ಟಾರ್ ಜೊತೆ ಸಿನಿಮಾ ಮಾಡಲು ಕೈಜೋಡಿಸುವ ಮೂಲಕ ಟಾಲಿವುಡ್‍ಗೂ ಕೆವಿಎನ್ ನಿರ್ಮಾಣ ಸಂಸ್ಥೆ ಎಂಟ್ರಿಕೊಟ್ಟಿದೆ.

Leave a Reply

Your email address will not be published. Required fields are marked *

error: Content is protected !!