ಉದಯವಾಹಿನಿ, ಬೆಂಗಳೂರು: ಮಾತನಾಡುವವರು ಮಾತಾಡಲಿ, ಸೂಕ್ತ ವೇದಿಕೆಯಲ್ಲಿ ನಾನು ಈ ಬಗ್ಗೆ ಮಾತನಾಡುತ್ತೇನೆ ಎಂದು ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಹೇಳಿದ್ದಾರೆ.
ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧ ವಿಚಾರವಾಗಿ ಮಾತನಾಡಿದ ಅವರು, ಯಾರು ಏನು ಮಾತಾಡುತ್ತಾರೋ ಮಾತಾಡಲಿ. ನಾನು ಸೂಕ್ತ ಸಮಯದಲ್ಲಿ ಮಾತಾಡುತ್ತೇನೆ. ಈ ಹಿಂದೆ ನಾನು ಏನು ಮಾತಾಡಿದ್ದೇನೆ ಎಂದು ಸರಿಯಾಗಿ ತಿಳಿಕೊಂಡು ಮಾತಾಡಲಿ. ಯಾರೋ ವಿರೋಧ ಮಾಡಿದ್ರೆ ನಾನು ಉತ್ತರ ಕೊಡಬೇಕಾ? ಇದರ ಬಗ್ಗೆ ನಾನು ವಿವರವಾಗಿ ಮಾತಾಡ್ತೀನಿ ಎಂದಿದ್ದಾರೆ.ಸದ್ಯ ವಿರೋಧ ಮಾಡುವ ಬಗ್ಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ. ವಿರೋಧ ಮಾಡುವವರು ಮಾಡಲಿ ಅದು ಅವರ ಸ್ವಾತಂತ್ರ‍್ಯ. ನಾನು ಅದಕ್ಕೆ ಪ್ರತಿಕ್ರಿಯೆ ಕೊಡಲ್ಲ. ನಾನು ಸೂಕ್ತವಾದ ವೇದಿಕೆಯಲ್ಲಿ ಸಕ್ಷಮವಾಗಿ ಮಾತಾಡ್ತೀನಿ ಎಂದು ತಿಳಿಸಿದ್ದಾರೆ.
2025ರ ಮೈಸೂರು ದಸರಾವನ್ನು ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಉದ್ಘಾಟಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಘೋಷಿಸಿದ್ದರು. ಅದಾದ ಬಳಿಕ ಮಾಜಿ ಸಂಸದ ಪ್ರತಾಪ ಸಿಂಹ ಹಾಗೂ ಶಾಸಕ ಯತ್ನಾಳ್ ವಿರೋಧಿಸಿದ್ದರು.

Leave a Reply

Your email address will not be published. Required fields are marked *

error: Content is protected !!