ಉದಯವಾಹಿನಿ , ನವದೆಹಲಿ: ಸೆ.13ರಂದು ಮಿಜೋರಾಂ ಹಾಗೂ ಮಣಿಪುರಕ್ಕೆ ಪ್ರಧಾನಿ ಮೋದಿ ಭೇಟಿ ನೀಡುವ ಸಾಧ್ಯತೆಯಿದ್ದು, ಎರಡೂ ರಾಜ್ಯಗಳಲ್ಲಿಯೂ ಎಲ್ಲಾ ಸಿದ್ಧತೆಗಳು ಆರಂಭವಾಗಿದೆ ಎನ್ನಲಾಗುತ್ತಿದೆ.
ಮೂಲಗಳ ಪ್ರಕಾರ, ಪ್ರಧಾನಿ ಮೋದಿ ಮೊದಲು ಮಿಜೋರಾಂಗೆ ಭೇಟಿ ನೀಡಲಿದ್ದು, ಅಲ್ಲಿ ಅವರು ಬೈರಾಬಿ-ಸೈರಾಂಗ್ ರೈಲ್ವೆ ಯೋಜನೆಯನ್ನು ಉದ್ಘಾಟಿಸಲಿದ್ದಾರೆ. ಈ ಯೋಜನೆ ಮೂಲಕ ಈಶಾನ್ಯದಲ್ಲಿ ಸಂಪರ್ಕವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದ್ದು, ಕೇಂದ್ರದ ಪ್ರಮುಖ ಮೂಲಸೌಕರ್ಯ ಯೋಜನೆಯಾಗಿದೆ. ಹೊಸ ರೈಲು ಸಂಪರ್ಕವು ಐಜ್ವಾಲ್ ಅನ್ನು ಆಸ್ಸಾಂನ ಸಿಲ್ಚಾರ್‌ನೊಂದಿಗೆ ಮತ್ತು ದೇಶದ ಉಳಿದ ಭಾಗಗಳೊಂದಿಗೆ ಸಂಪರ್ಕಿಸುತ್ತದೆ ಎಂದು ತಿಳಿದುಬಂದಿದೆ.ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಮಿಜೋರಾಂ ಮುಖ್ಯ ಕಾರ್ಯದರ್ಶಿ ಖಿಲ್ಲಿ ರಾಮ್ ಮೀನಾ ಅವರು, ಭದ್ರತೆ, ಸಂಚಾರ ನಿಯಂತ್ರಣ ಮತ್ತು ಸಾರ್ವಜನಿಕ ಭಾಗವಹಿಸುವಿಕೆ ಸೇರಿದಂತೆ ಸಿದ್ಧತೆಗಳನ್ನು ಪರಿಶೀಲಿಸಲು ಸೋಮವಾರ (ಸೆ.1) ಉನ್ನತ ಮಟ್ಟದ ಸಭೆ ನಡೆಸಿದರು. ಮಿಜೋರಾಂ ಭೇಟಿಯ ನಂತರ, ಪ್ರಧಾನಿ ಮೋದಿಯವರು ಮಣಿಪುರಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದು ಹೇಳಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!