ಉದಯವಾಹಿನಿ, ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ 107 ಕೆರೆಗಳಿಗೆ ಬೇಡ್ತಿ ನದಿಯಿಂದ ನೀರು ತುಂಬಿಸುವ 179.50 ಕೋಟಿ ರೂ. ವೆಚ್ಚದ ಕಾಮಗಾರಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಸಂಪುಟದ ಈ ನಿರ್ಣಯಕ್ಕೆ ಕಾರ್ಮಿಕ ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕಲಘಟಗಿ ವಿಧಾಸಭಾ ಕ್ಷೇತ್ರದ ಶಾಸಕ ಸಂತೋಷ್ ಲಾಡ್ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಭಾಗದ ಅನ್ನದಾತರ ಬಹುದಿನಗಳ ಬೇಡಿಕೆಯಾಗಿದ್ದ ಹಾಗೂ ಸಂತೋಷ್ ಲಾಡ್ ಅವರ ಕನಸಾದ ಈ ಏತ ನೀರಾವರಿ ಯೋಜನೆ ಈಗ ಸಾಕಾರಗೊಳ್ಳುತ್ತಿದ್ದು, ಲಾಡ್ ಅವರ ನಿರಂತರ ಶ್ರಮ ಹಾಗೂ ಪ್ರಯತ್ನ ಫಲ ಕೊಟ್ಟಂತಾಗಿದೆ. ಈ ನೀರೆತ್ತುವ ಯೋಜನೆಗೆ ಇದೀಗ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದ್ದು, ಸಂಪುಟದಲ್ಲಿ ಅನುಮೋದನೆ ಪಡೆದು ವೇಗ ಸಿಕ್ಕಂತಾಗಿದೆ. ಅಂತರ್ಜಲ ಮಟ್ಟ ಹೆಚ್ಚಿಸುವ ಶಾಶ್ವತ ನೀರಾವರಿ ಯೋಜನೆ ಇದಾಗಿದ್ದು, ಈ ಭಾಗದ ಕೃಷಿ ಮತ್ತು ಕೃಷಿಯೇತರ ಚಟುವಟಿಕೆಗಳಿಗೆ ಈ ಕೆರೆ ತುಂಬಿಸುವ ಯೋಜನೆಯಿಂದ ಅನುಕೂಲವಾಗಲಿದೆ.

Leave a Reply

Your email address will not be published. Required fields are marked *

error: Content is protected !!