ಉದಯವಾಹಿನಿ, ಬೆಂಗಳೂರು: ಇಂದು ನಭೋ ಮಂಡಲದಲ್ಲಿ ಈ ವರ್ಷದ ಎರಡನೇ ಮತ್ತು ಕೊನೆಯ ಚಂದ್ರಗ್ರಹಣ ನಡೆಯಲಿದೆ. ಈ ಗ್ರಹಣದ ಎಫೆಕ್ಟ್ ದೇವರಿಗೂ ತಟ್ಟಲಿದ್ದು, ಬೆಂಗಳೂರಿನ ಬಹುತೇಕ ದೇವಾಲಯಗಳು ಮಧ್ಯಾಹ್ನವೇ ಬಂದ್ ಆಗಲಿವೆ. ಇಂದು ಭಾರತದಲ್ಲಿ ಚಂದ್ರಗ್ರಹಣ ಸಂಭವಿಸಲಿದ್ದು, ಜನರಲ್ಲಿ ಸಾಕಷ್ಟು ಆತಂಕ ಮನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಬಹುತೇಕ ದೇವಾಲಯಗಳು ಮಧ್ಯಾಹ್ನವೇ ಕ್ಲೋಸ್ ಆಗಲಿವೆ.
ನಗರದ ಪ್ರಸಿದ್ಧ ದೇಗುಲಗಳ ಸಮಯವೂ ಬದಲಾವಣೆಯಾಗಲಿದೆ. ನಗರದ ಗವಿಪುರಂನ ಗವಿಗಂಗಾಧರೇಶ್ವರ ದೇವಾಲಯ ಇಂದು ಬೆಳಗ್ಗೆ 12 ಗಂಟೆಗೆ ಬಂದ್ ಆಗಲಿದ್ದು, ಗ್ರಹಣಕ್ಕೂ ಮೊದಲೇ ಸುಮಾರು 6 ಗಂಟೆ ದೇವಾಲಯ ಬಂದ್ ಆಗಲಿದೆ. ಗ್ರಹಣದ ಮರುದಿನ ಸೋಮವಾರ ಬೆಳಗ್ಗೆ 6 ಗಂಟೆಗೆ ಶುದ್ಧೀಕರಣ, ಪುಣ್ಯ ಮಾಡಿ ದರ್ಶನ ವ್ಯವಸ್ಥೆ ಮಾಡಲಾಗಿದೆ.

ಇನ್ನೂ, ಗ್ರಹಣದ ದಿನ ಅಂದ್ರೆ ಇಂದು ಬನಶಂಕರಿ ದೇವಿ ಜನ್ಮದಿನೋತ್ಸವವಿದ್ದು, ಸಂಜೆ 4 ಗಂಟೆಯವರೆಗೆ ಚಂಡಿಕಾ ಹೋಮ ಸೇರಿದಂತೆ ದೇವಿಗೆ ವಿಶೇಷ ಅಲಂಕಾರ ಮಾಡಲಾಗುತ್ತದೆ. ರಾಹುಕಾಲದ ಪೂಜೆ ಮುಗಿಸಿ 6 ಗಂಟೆಗೆ ದೇವಾಲಯದ ಎಲ್ಲಾ ಕಡೆ ದರ್ಬೆ ಇಟ್ಟು ಬಾಗಿಲು ಕ್ಲೋಸ್ ಮಾಡಲಾಗಿದೆ. ಮರುದಿನ ಬೆಳಗ್ಗೆ 5 ಗಂಟೆಗೆ ದೇವಾಲಯ ಶುದ್ಧೀಕರಣ ಮಾಡಿ, ಬೆಳಗ್ಗೆ 6 ಗಂಟೆಯಿಂದ ಭಕ್ತರಿಗೆ ದೇವಿ ದರ್ಶನಕ್ಕೆ ಅವಕಾಶ ನೀಡಲಾಗಿದೆ. ನಗರದ ಕಾಡುಮಲ್ಲೇಶ್ವರ ದೇವಾಲಯ, ಸಂಜೆ 6:30ಕ್ಕೆ ಕ್ಲೋಸ್ ಆಗಲಿದೆ. ನಾಳೆ ಅಂದರೇ ಸೋಮವಾರ ಬೆಳಿಗ್ಗೆ 4 ಗಂಟೆಗೆ ದೇವಾಲಯ ಒಪನ್ ಆಗಲಿದ್ದು, ಶುದ್ಧೀಕರಣ ಕಾರ್ಯ, ನಂತರ ಗ್ರಹಣ ಶಾಂತಿಗಾಗಿ ರುದ್ರ ಹೋಮ, ಪ್ರಸಾದ ಸೇವೆಯಿದೆ.

Leave a Reply

Your email address will not be published. Required fields are marked *

error: Content is protected !!