ಉದಯವಾಹಿನಿ, ದುಬೈ: ಬಹುನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾಕಪ್ ಪಂದ್ಯ ನಾಳೆ ನಡೆಯಲಿದೆ. ದುಬೈ ಕ್ರೀಡಾಂಗಣದಲ್ಲಿ ರಾತ್ರಿ 8ಕ್ಕೆ ಪಂದ್ಯ ಶುರುವಾಗಲಿದೆ. ಈ ನಡುವೆ ಮೊದಲ ಪಂದ್ಯ ಗೆದ್ದು ಶುಭಾರಂಭ ಮಾಡಿರುವ ಪಾಕ್ ತಂಡದ ನಾಯಕ ಸಲ್ಮಾನ್ ಅಘಾ ಟೀಂ ಇಂಡಿಯಾಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ. ಒಮನ್ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ಪಾಕ್ 93 ರನ್ಗಳ ಭರ್ಜರಿ ಜಯ ಸಾಧಿಸಿತು. ಪಂದ್ಯದ ಬಳಿಕ ಪೋಸ್ಟ್ ಪ್ರೆಸೆಂಟೇಷನ್ನಲ್ಲಿ ಮಾತನಾಡಿದ ನಾಯಕ ಸಲ್ಮಾನ್ ಅಘಾ, ನಾವು ನಮ್ಮ ಪ್ಲ್ಯಾನಿಂಗ್ ಅನ್ನು ಸರಿಯಾದ ರೀತಿಯಲ್ಲಿ ಕಾರ್ಯಗತಗೊಳಿಸಿದ್ರೆ ಭಾರತ ಸೇರಿದಂತೆ ಯಾವುದೇ ತಂಡವನ್ನು ಸೋಲಿಸುವಷ್ಟು ಸಮರ್ಥರಿದ್ದೇವೆ ಎಂದು ತಿಳಿಸಿದ್ರು.
ಕಳೆದ 2-3 ತಿಂಗಳಿನಿಂದ ನಾವು ಉತ್ತಮ ಕ್ರಿಕೆಟ್ ಆಡ್ತಿದ್ದೇವೆ, ಇದು ಇನ್ನಷ್ಟು ಬೆಳವಣಿಗೆ ಆಗಬೇಕಾಗಿದೆ. ಅದಕ್ಕಾಗಿ ದೀರ್ಘಕಾಲದ ವರೆಗೆ ನಮ್ಮ ಪ್ಲ್ಯಾನಿಂಗ್ ಅನ್ನು ಸಕ್ರಿಯಗೊಳಿಸಬೇಕು. ಆಗ ಯಾವುದೇ ತಂಡವನ್ನು ಸೋಲಿಸಲು ನಮ್ಮಿಂದ ಸಾಧ್ಯವಾಗುತ್ತದೆ ಎಂದು ಸಹ ಆಟಗಾರರಿಗೆ ಕಿವಿಮಾತು ಹೇಳಿದ್ರು.
