ಉದಯವಾಹಿನಿ, ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಎ.ಜಿ. ಮಸಿಹ್ ಅವರ ಪೀಠವು ವಕ್ಫ್ (ತಿದ್ದುಪಡಿ) ಕಾಯ್ದೆ 2025ರ ಕೆಲವು ನಿಬಂಧನೆಗಳಿಗೆ ಸೋಮವಾರ ತಡೆ ನೀಡಿದೆ.
ವಕ್ಫ್ ಕಾನೂನು 2025 ರ ಕುರಿತು ತನ್ನ ತೀರ್ಪು ನೀಡುವ ವೇಳೆ ಸುಪ್ರೀಂ ಕೋರ್ಟ್, ಈ ಕಾನೂನನ್ನು ನಿಷೇಧಿಸುವ ಹಕ್ಕು ನಮಗಿಲ್ಲ ಎಂದು ಸ್ಪಷ್ಟಪಡಿಸಿತು. ಆದರೆ, ವಕ್ಫ್ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುಸ್ಲಿಂ ಅಲ್ಲದವರಾಗಿರಬಾರದು ಅಥವಾ ಆಸ್ತಿಯ ಬಗ್ಗೆ ಕಲೆಕ್ಟರ್ ನಿರ್ಧಾರವನ್ನು ಅಂತಿಮವೆಂದು ಪರಿಗಣಿಸಲಾಗುವುದಿಲ್ಲ. ಕೆಲವು ವಿಭಾಗಗಳಲ್ಲಿ ರಕ್ಷಣೆ ಅಗತ್ಯವಿದೆ ಎಂದು ನ್ಯಾಯಾಲಯ ಹೇಳಿದೆ. ಈತನ್ಮಧ್ಯೆ, ಕಾಂಗ್ರೆಸ್ ರಾಜ್ಯಸಭಾ ಸಂಸದ ಮತ್ತು ಅರ್ಜಿದಾರ ಇಮ್ರಾನ್ ಪ್ರತಾಪ್‌ಗಢಿ ನ್ಯಾಯಾಲಯದ ತೀರ್ಪಿನ ಬಗ್ಗೆ ತಮ್ಮ ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ‘ಇದು ಒಳ್ಳೆಯ ನಿರ್ಧಾರ, ಇದರಿಂದ ನನಗೆ ಸಂತೋಷವಾಗಿದೆ. ವಕ್ಫ್ ಅನ್ನು ಉಳಿಸಲು ಇದು ದೊಡ್ಡ ಹೋರಾಟ. ನಾವು ಹೋರಾಡುತ್ತಲೇ ಇರುತ್ತೇವೆ’ ಎಂದು ಇಮ್ರಾನ್ ಪ್ರತಾಪ್ ಗಾಧಿ ಹೇಳಿದರು.
ಸುಪ್ರೀಂ ಕೋರ್ಟ್‌ನಲ್ಲಿ ವಕ್ಫ್ ಕಾನೂನಿನ ಸಾಂವಿಧಾನಿಕತೆಯನ್ನು ಪ್ರಶ್ನಿಸಿದವರಲ್ಲಿ ಕಾಂಗ್ರೆಸ್ ಸಂಸದ ಇಮ್ರಾನ್ ಪ್ರತಾಪ್‌ಗಢಿ ಕೂಡ ಒಬ್ಬರು. ಅವರಲ್ಲದೆ, ಡಿಎಂಕೆ, ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ, ಕಾಂಗ್ರೆಸ್ ಸಂಸದ ಮೊಹಮ್ಮದ್ ಜಾವೇದ್, ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ) ಮತ್ತು ಜಮಿಯತ್ ಉಲಮಾ-ಎ-ಹಿಂದ್ ಈ ಕಾನೂನನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

Leave a Reply

Your email address will not be published. Required fields are marked *

error: Content is protected !!