ಉದಯವಾಹಿನಿ, ಬೆಂಗಳೂರು: ವಿಪಕ್ಷಗಳಿಗೆ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡದೇ ಆಕ್ರೋಶಕ್ಕೆ ಕಾರಣವಾಗಿದ್ದ ಸಿಎಂ ಸಿದ್ದರಾಮಯ್ಯ ಕೊನೆಗೂ ವಿಪಕ್ಷಗಳಿಗೆ ಅನುದಾನ ರಿಲೀಸ್ ಮಾಡಿದ್ದಾರೆ. ಪ್ರತಿ ವಿಧಾನಸಭೆ ಕ್ಷೇತ್ರಕ್ಕೆ ತಲಾ 25 ಕೋಟಿಯಂತೆ ಅನುದಾನ ರಿಲೀಸ್ ಮಾಡಲು ಸಿಎಂ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
ಸಿಎಂ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಹಣ ಬಿಡುಗಡೆ ಮಾಡಲಾಗುತ್ತಿದೆ. ಹಿಂದೆ ಕಾಂಗ್ರೆಸ್ ಶಾಸಕರಿಗೆ ಮಾತ್ರ 50 ಕೋಟಿ ರೂ. ಅನುದಾನ ಸಿಎಂ ರಿಲೀಸ್ ಮಾಡಿದ್ದರು. ಇದು ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಅಧಿವೇಶನದಲ್ಲಿ ಈ ಬಗ್ಗೆ ವಿಪಕ್ಷಗಳು ವಿರೋಧ ಮಾಡಿದ್ದವು. ಇದೀಗ ವಿಪಕ್ಷಗಳ ಶಾಸಕರಿಗೂ ಸಿಎಂ ಅನುದಾನ ಬಿಡುಗಡೆ ಮಾಡಿದ್ದಾರೆ.
ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಅಡಿ ಬರುವ ರಸ್ತೆ, ಸೇತುವೆ ಹಾಗೂ ನಗರಾಭಿವೃದ್ಧಿ ಇಲಾಖೆ ಅಡಿ ಬರೋ ನಗರ ಪ್ರದೇಶ ಕಾಮಗಾರಿಗಳಿಗೆ 18.75 ಕೋಟಿ ರೂ. ಬಿಡುಗಡೆ ಹಾಗೂ ವಿವೇಚನಾಧಿಕಾರದಡಿ ವಿಧಾನಸಭೆ ಸದಸ್ಯರು ಆಯ್ಕೆ ಮಾಡಬಹುದಾದ ಇತರ ಇಲಾಖೆ ಕಾಮಗಾರಿಗಳಿಗೆ 6.25 ಕೋಟಿ ರೂ. ಬಿಡುಗಡೆ ಸೇರಿ ಒಟ್ಟು 25 ಕೋಟಿ ರೂ. ಅನುದಾನ ಬಿಡುಗಡೆಗೆ ಸಿಎಂ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!