ಉದಯವಾಹಿನಿ, ಕೆಜಿಎಫ್ ಸ್ಟಾರ್ ಯಶ್ ತಾಯಿ ಪುಷ್ಪ ಅವರ ನಿರ್ಮಾಣದ ಕೊತ್ತಲವಾಡಿ ಸಿನಿಮಾದಲ್ಲಿ ನಟಿಸಿದ್ದ ಕಲಾವಿದರಿಗೆ ಪೇಮೆಂಟ್ ಆಗಿಲ್ಲ ಎಂಬ ಆರೋಪ ಕೇಳಿಬಂದಿದೆ. ಪೇಮೆಂಟ್ ವಿಚಾರವಾಗಿ ಸಹ ಕಲಾವಿದರೊಬ್ಬರು ವೀಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಕೊತ್ತಲವಾಡಿ ಸಿನಿಮಾದಲ್ಲಿ ನಟಿಸಿರುವ ನಮಗೆ ಸಂಭಾವನೆ ಬಂದಿಲ್ಲ ಸಹ ನಟ ಮಹೇಶ್ ಗುರು ಆರೋಪ ಮಾಡಿದ್ದಾರೆ. ಫೇಸ್ಬುಕ್‌ನಲ್ಲಿ ಹಾಕಿದ್ದ ವಿಡಿಯೋ ವೈರಲ್ ಆಗಿತ್ತು. ಈಗ ನೋಡಿದ್ರೆ ವಿಡಿಯೋ ಡಿಲೀಟ್ ಆಗಿದೆ.
ನಿರ್ಮಾಪಕಿ ಪುಷ್ಪ ಅವರ ಗಮನಕ್ಕೆ ತರೋದಕ್ಕೆ ಮಹೇಶ್ ವೀಡಿಯೋ ಮಾಡಿದ್ದರು. ಖಳನಟನಾಗಿ ಸ್ಯಾಂಡಲ್‌ವುಡ್‌ನಲ್ಲಿ ಗುರುತಿಸಿಕೊಂಡಿರುವ ಮಹೇಶ್ ಗುರು, ನಿರ್ದೇಶಕರ ಕಡೆಯಿಂದ ನಮಗೆ ಚಾನ್ಸ್ ಸಿಕ್ತು. ಅವಾಗ ಒಂದು ಪ್ಯಾಕೇಜ್ ಮಾತಾಡಿದ್ರು. ಅಡ್ವಾನ್ಸ್ ದುಡ್ಡು ಕೊಡ್ತೀವಿ ಅಂದ್ರು. ಓಕೆ ಅಂತ ಒಪ್ಪಿಕೊಂಡೆ. ಅದಾದ ನಂತರ ಮುಹೂರ್ತ ಅಯ್ತು ದುಡ್ಡು ಕೊಡ್ಲಿಲ್ಲ, ಮೂರು ತಿಂಗಳು ಕೆಲಸ ಮಾಡಿದ್ವಿ, ಶೂಟಿಂಗ್ ಮುಗಿದ ಮೇಲೂ ಪೇಮೆಂಟ್ ಕೊಡ್ಲಿಲ್ಲ. ಡಬ್ಬಿಂಗ್ ಮಾಡಿ ಬಂದು ಮುಗಿದ್ಮೇಲೆ ಪೇಮೆಂಟ್ ಕೊಡ್ತೀನಿ ಅಂದ್ರು. ಅದು ಮಾಡಿದ್ವಿ ಪೇಮೆಂಟ್ ಕೊಡ್ಲಿಲ್ಲ ಎಂದು ದೂರಿದ್ದಾರೆ.
ಸಿನಿಮಾ ಪ್ರಮೋಷನ್ ಜೋರಾಗಿ ಮಾಡಿದ್ರು. ನಮ್ಮನ್ನ ಎಲ್ಲಿಗೂ ಕರೀಲಿಲ್ಲ, ದುಡ್ಡು ಕೊಡ್ಲಿಲ್ಲ. ಈಗ ಓಟಿಟಿಗೆ ಬಂದಿದೆ. ಆದ್ರೂ ದುಡ್ಡು ಕೊಟ್ಟಿಲ್ಲ. ಪ್ರೊಡ್ಯೂಸರ್‌ಗೆ ಗೊತ್ತೋ, ಗೊತ್ತಿಲ್ವ ಗೊತ್ತಿಲ್ಲ. ಪ್ರೊಡ್ಯೂಸರ್ ಪುಷ್ಪ ಅವರಿಗೆ ಹೇಳೋಣ ಅಂದ್ರೆ ಯಾರೂ ನಂಬರ್ ಕೂಡ ಕೊಡ್ತಿಲ್ಲ. ನಮಗೆ ಆಗಿರುವ ಮೋಸನ ನಿರ್ಮಾಪಕಿಗೆ ತಿಳಿಸಿಬೇಕಿದೆ. ನ್ಯಾಯ ಸಿಗ್ಬೇಕು ಅನ್ನೋದೇ ನಾನು ಈ ವೀಡಿಯೋದ ಉದ್ದೇಶ ಅಷ್ಟೆ ಎಂದು ಗುರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!