ಉದಯವಾಹಿನಿ,ಹಾವೇರಿ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ ನಾಲ್ವರು ಗಂಭೀರವಾಗಿ ಗಾಯಗೊಂಡ ದಾರುಣ ಘಟನೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
ಬಸ್ ಚಾಲಕ ಸದಾನಂದ(50) ಬೆಳಗಾವಿಯ ರಾಹುಲ್ (22) ಮೃತಪಟ್ಟವರು. ಅಪಘಾತದಲ್ಲಿ ಗಾಯಗೊಂಡ ನಾಲ್ವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು ಅವರಲ್ಲಿ ಇಬ್ಬರು ಸ್ಥಿತಿ ಚಿಂತಾಜನಕವಾಗಿದೆ.
ಬೆಂಗಳೂರಿನಿಂದ ಮೀರಜ್‌ಗೆ ಹೋಗುತ್ತಿದ್ದ ಸಂದರ್ಭದಲ್ಲಿ ನಸುಕಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತಗೊಂಡ ಬಸ್‌ನೊಳಗಿಂದ ಸಿಲುಕಿದ್ದ ಮೃತದೇಹವನ್ನು ಹೊರತೆಗೆಯಲು ಪೊಲೀಸರು ಹರಸಾಹಸ ಪಡಬೇಕಾಯಿತು.
ಬಸ್ ಪಲ್ಟಿಯಾಗಿದ್ದರಿಂದ ಚಾಲಕ ಹಾಗೂ ಪ್ರಯಾಣಿಕ ಗಂಭೀರ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳಿದಿದ್ದಾರೆ. ಅಪಘಾತದ ಪರಿಣಾಮ ಬಸ್‌ನ ಗಾಜು ಪುಡಿ ಪುಡಿಯಾಗಿದೆ. ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಸಂಬAಧ ಬ್ಯಾಡಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!