ಉದಯವಾಹಿನಿ, ಹಾಸನ: ಬೇಲೂರಿನ (Belur) ಗಣೇಶ ಮೂರ್ತಿಗೆ (Ganesha Idol) ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿದ ಆರೋಪಿ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಸನದ (Hassan) ಗುಡ್ಡೇನಹಳ್ಳಿ ಬಳಿ ಮಹಿಳೆಯನ್ನು ವಶಕ್ಕೆ ಪಡೆಯಲಾಗಿದೆ. ಬಾಣಾವರ ಪಿಎಸ್ಐ ಸುರೇಶ್, ಶೋಭಾ ನೇತೃತ್ವದ ತಂಡ ಮಹಿಳೆಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆಗೆ ಮುಂದಾಗಿದೆ.
ಹಾಸನ ಜಿಲ್ಲೆಯಲ್ಲಿ ಮಹಾಲಯ ಅಮವಾಸ್ಯೆಯ ಬೆನ್ನಲ್ಲೇ ಮಹಿಳೆಯೊಬ್ಬರು ವಿಕೃತಿ ಮೆರೆದಿದ್ದಾರೆ. ಬೇಲೂರು ಪಟ್ಟಣದಲ್ಲಿರುವ ಶ್ರೀ ವಿದ್ಯಾಗಣಪತಿ ದೇವಸ್ಥಾನದ ಕಲ್ಲಿನ ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆದಿರುವ ಘಟನೆ ನಡೆದಿದೆ. ಶನಿವಾರ ರಾತ್ರಿ ಈ ಘಟನೆ ನಡೆದಿದ್ದು, ಬೆಳಗ್ಗೆ ಭಕ್ತಾಧಿಗಳು ಕೈ ಮುಗಿಯಲು ಹೋದಾಗ ಗಣಪತಿಗೆ ಚಪ್ಪಲಿ ಹಾರ ಹಾಕಿರುವುದು ಬೆಳಕಿಗೆ ಬಂದಿದೆ.
ಇನ್ನು ಪ್ರತಿಭಟನಾ ಸ್ಥಳಕ್ಕೆ ಬೇಲೂರು ತಹಸೀಲ್ದಾರ್, ಎಸ್ಪಿ ಮಹಮದ್ ಸುಜೇತಾ ಭೇಟಿ ನೀಡಿ ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ಮಾಡಿದ್ರು. ಮತ್ತೊಂದೆಡೆ ಅರ್ಚಕರು ಶುದ್ಧಿಕಾರ್ಯ ನಡೆಸಿದ್ದಾರೆ. ತನಿಖೆಗೆ ಮುಂದಾದ ಪೊಲೀಸರು ಸಿಸಿಟಿವಿ ದೃಶ್ಯಗಳ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ದೇವಸ್ಥಾನಕ್ಕೆ ಮಹಿಳೆಯೊಬ್ಬರು ಮುಖಕ್ಕೆ ಕಪ್ಪು ಬಟ್ಟೆ ಕಟ್ಟಿಕೊಂಡು ಎಂಟ್ರಿಯಾದ ದೃಶ್ಯ ಸೆರೆಯಾಗಿದೆ. ಕಬ್ಬಿಣದ ಬಾಗಿಲು ತೆರೆದು ಒಳಗೆ ಬಂದ ಆಕೆ ಗಣೇಶ ಮೂರ್ತಿ ಬಳಿ ಹೋಗಿರುವ ದೃಶ್ಯ ಸೆರೆಯಾಗಿದೆ.
