ಉದಯವಾಹಿನಿ, ಮಂಗಳೂರು: ಧರ್ಮಸ್ಥಳದಲ್ಲಿ ಸಿಕ್ಕ ಮತ್ತೊಂದು ಅಸ್ಥಿಪಂಜರದ ಗುರುತು ಪತ್ತೆಯಾಗಿದೆ.
ಬಂಗ್ಲೆಗುಡ್ಡ ನೆಲದ ಮೇಲೆ ಪತ್ತೆಯಾದ ಅಸ್ಥಿಪಂಜರದ ಬಳಿ ಡ್ರೈವಿಂಗ್ ಲೈಸೆನ್ಸ್ ಸಿಕ್ಕಿತ್ತು. ಈ ಡ್ರೈವಿಂಗ್‌ ಲೈಸೆನ್ಸ್‌ನಲ್ಲಿ ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ಆದಿಶೇಷ ನಾರಾಯಣ ಎಂದು ಹೆಸರು ಇತ್ತು.ಡಿಎಲ್‌ ಸಿಕ್ಕಿದ ಹಿನ್ನೆಲೆಯಲ್ಲಿ ಆದಿಶೇಷ ನಾರಾಯಣ ಕುಟುಂಬಸ್ಥರಿಗೆ ವಿಶೇಷ ತನಿಖಾ ತಂಡ (SIT) ವಿಚಾರಣೆಗೆ ಬರುವಂತೆ ಬುಲಾವ್‌ ನೀಡಿತ್ತು. ಆದಿಶೇಷ ನಾರಾಯಣ 2013 ಅಕ್ಟೋಬರ್ 2 ರಿಂದ ನಾಪತ್ತೆಯಾಗಿದ್ದ. ಬಾರ್‌ನಲ್ಲಿ ಕ್ಯಾಶಿಯಾರ್ ಆಗಿ ಕೆಲಸ ಮಾಡುತ್ತಿದ್ದ ಯುವಕ ಏಕಾಏಕಿ ನಾಪತ್ತೆಯಾಗಿದ್ದ. ನಾಪತ್ತೆ ಸಂಬಂಧ ಕುಟುಂಬಸ್ಥರು ಯಾವುದೇ ಪ್ರಕರಣ ದಾಖಲಿಸಿರಲಿಲ್ಲ.
ಇಂದು ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ಕುಟುಂಬಸ್ಥರು ಆಗಮಿಸಿ ಹೇಳಿಕೆ ನೀಡಿದ್ದಾರೆ. ವಿಚಾರಣೆಯ ನಂತರ ಡಿಎನ್‌ಎ ಟೆಸ್ಟ್‌ ನಡೆಸಲು ಮತ್ತೊಮ್ಮೆ ಬರುವಂತೆ ಪೊಲೀಸರು ಸೂಚಿಸಿದ್ದಾರೆ. ನಾಪತ್ತೆಯಾದ ಬಳಿಕ ನಾವು ಆತನನ್ನು ಹುಡುಕಲಿಲ್ಲ. ಮಾನಸಿಕವಾಗಿ ಚೆನ್ನಾಗಿದ್ದ ಎಂದು ಆದಿಶೇಷ ನಾರಾಯಣನ ಕುಟುಂಬಸ್ಥರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!