ಉದಯವಾಹಿನಿ, ಉತ್ತರ ಪ್ರದೇಶ: ‘ಐ ಲವ್‌ ಮುಹಮ್ಮದ್‌’ ಉಲ್ಬಣಗೊಂಡಿದೆ. ರಾಯಬರೇಲಿಯಲ್ಲಿ ಪ್ರತಿಭಟನೆ ವೇಳೆ ಕಲ್ಲೆಸೆತವಾಗಿದ್ದು, ಪೊಲೀಸರು ಲಾಠಿಚಾರ್ಜ್‌ ನಡೆಸಿದ್ದಾರೆ.ಪ್ರಾರ್ಥನೆ ಬಳಿಕ ಪ್ರತಿಭಟನೆ ಶುರುವಾಗಿದೆ. ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದಾಗ ಲಾಠಿಚಾರ್ಜ್ ಮಾಡಲಾಗಿದೆ. ಪರಿಸ್ಥಿತಿ ಉದ್ವಿಗ್ನವಾದ ಹಿನ್ನೆಲೆ ಭದ್ರತೆ ಆರ್‌ಎಎಫ್ ಮತ್ತು ಪಿಎಸಿ ನಿಯೋಜನೆ ಮಾಡಲಾಗಿದೆ.
ಸೆ.4 ರಂದು ‘ಐ ಲವ್ ಮುಹಮ್ಮದ್’ ಪೋಸ್ಟರ್ ಹೊಂದಿರುವ ಟೆಂಟ್ ಅನ್ನು ಪೊಲೀಸರು ತೆಗೆಸಿದ್ದರು. ನಂತರ ಕಾನ್ಪುರದಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಧ್ವನಿ ಎತ್ತಲು ಮತ್ತು ಜ್ಞಾಪಕ ಪತ್ರವನ್ನು ಸಲ್ಲಿಸಲು ಧರ್ಮಗುರುವೊಬ್ಬರು ಕರೆ ನೀಡಿದ್ದರು. ಶುಕ್ರವಾರದ ಪ್ರಾರ್ಥನೆಯ ನಂತರ ಬರೇಲಿಯ ಇಸ್ಲಾಮಿಯಾ ಮೈದಾನದ ಬಳಿ ಭಾರಿ ಜನಸಮೂಹ ಜಮಾಯಿಸಿತ್ತು.
ಕೆಲವರು ಆಕ್ಷೇಪಾರ್ಹ ಘೋಷಣೆಗಳನ್ನು ಕೂಗುತ್ತಿದ್ದಂತೆ ಜನಸಮೂಹ ಹೆಚ್ಚುತ್ತಲೇ ಇತ್ತು. ಕೆಲವು ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ನಂತರ, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿಪ್ರಹಾರ ನಡೆಸಿದರು.

Leave a Reply

Your email address will not be published. Required fields are marked *

error: Content is protected !!